Advertisement
Categories: Uncategorized

ಸುಬ್ರಹ್ಮಣ್ಯ ಕಾಲೇಜಿನಲ್ಲಿ ಪೋಷಕ-ವಿದ್ಯಾರ್ಥಿಗಳ ಸಮ್ಮಿಲನ

Share

ಸುಬ್ರಹ್ಮಣ್ಯ: ಕೇವಲ ವಿದ್ಯಾಲಯಕ್ಕೆ ಕಳುಹಿಸಿದರೆ ಪೋಷಕರ ಕರ್ತವ್ಯ ಮುಗಿಯುವುದಿಲ್ಲ ಬದಲಾಗಿ ಮಕ್ಕಳ ಬಗ್ಗೆ ನಿರಂತರ ಆಸ್ಥೆ ವಹಿಸಬೇಕು.ಅಲ್ಲದೆ ಮಕ್ಕಳಿಗೆ ಶಿಸ್ತಿನ ಅರಿವು ಸದಾ ಅನುರಣಿತವಾಗುವಂತೆ ಮಾಡಬೇಕು ಹಾಗಾದಾಗ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ  ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕುಕ್ಕೆ ದೇವಳದ ವತಿಯಿಂದ ಕಾಲೇಜಿಗೆ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ನೀಡಲಾಗಿದೆ.ಅಲ್ಲದೆ ಶ್ರೀ ದೇವರ ವರಪ್ರಸಾದದಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಕಾಲೇಜಿನಲ್ಲಿ ನೆರವೇರಲಿದೆ.ಅಲ್ಲದೆ ವಿದ್ಯಾರ್ಥಿಗಳ ವಿದ್ಯಾರ್ಜನೆ ಇನ್ನಷ್ಟು ಆವಶ್ಯಕತೆಗಳನ್ನು ಆಡಳಿತ ಮಂಡಳಿ ಒದಗಿಸಲಿದೆ ಎಂದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್ ಮುಖ್ಯಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್,ಹಿರಿಯ ಉಪನ್ಯಾಸಕರಾದ ಎ.ಆರ್.ಮುಲ್ಲಾ, ಸೋಮಶೇಖರ ನಾಯಕ್, ಜಯಶ್ರೀ.ವಿ.ದಂಬೆಕೋಡಿ, ಮೋಹನ್ ಗೌಡ ಸೇರಿದಂತೆ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ನುಡಿ ಹರೆಯವನ್ನು ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸಮಾಗಮ ನೆರವೇರಿತು.ನೂತನವಾಗಿ ಪ್ರಥಮ ಪಿಯುಸಿಗೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಬಗ್ಗೆ, ಇಲ್ಲಿನ ಸವಲತ್ತುಗಳ ಬಗ್ಗೆ, ಅಳವಡಿಸಿಕೊಳ್ಳಬೇಕಾದ ಶಿಸ್ತಿನ ಬಗ್ಗೆ ಮಾಹಿತಿ ನೀಡಲಾಯಿತು.

ಉಪನ್ಯಾಸಕ ಮೋಹನ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್ ಪ್ರಸ್ತಾಪಿಸಿದರು.ಉಪನ್ಯಾಸಕಿ ಜ್ಯೋತಿ.ಪಿ.ರೈ ವಂದಿಸಿದರು. ಉಪನ್ಯಾಸಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago