Advertisement
Categories: Uncategorized

ಸುಬ್ರಹ್ಮಣ್ಯ ಕಾಲೇಜಿನಲ್ಲಿ ಪೋಷಕ-ವಿದ್ಯಾರ್ಥಿಗಳ ಸಮ್ಮಿಲನ

Share

ಸುಬ್ರಹ್ಮಣ್ಯ: ಕೇವಲ ವಿದ್ಯಾಲಯಕ್ಕೆ ಕಳುಹಿಸಿದರೆ ಪೋಷಕರ ಕರ್ತವ್ಯ ಮುಗಿಯುವುದಿಲ್ಲ ಬದಲಾಗಿ ಮಕ್ಕಳ ಬಗ್ಗೆ ನಿರಂತರ ಆಸ್ಥೆ ವಹಿಸಬೇಕು.ಅಲ್ಲದೆ ಮಕ್ಕಳಿಗೆ ಶಿಸ್ತಿನ ಅರಿವು ಸದಾ ಅನುರಣಿತವಾಗುವಂತೆ ಮಾಡಬೇಕು ಹಾಗಾದಾಗ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

Advertisement
Advertisement

ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ  ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕುಕ್ಕೆ ದೇವಳದ ವತಿಯಿಂದ ಕಾಲೇಜಿಗೆ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ನೀಡಲಾಗಿದೆ.ಅಲ್ಲದೆ ಶ್ರೀ ದೇವರ ವರಪ್ರಸಾದದಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಕಾಲೇಜಿನಲ್ಲಿ ನೆರವೇರಲಿದೆ.ಅಲ್ಲದೆ ವಿದ್ಯಾರ್ಥಿಗಳ ವಿದ್ಯಾರ್ಜನೆ ಇನ್ನಷ್ಟು ಆವಶ್ಯಕತೆಗಳನ್ನು ಆಡಳಿತ ಮಂಡಳಿ ಒದಗಿಸಲಿದೆ ಎಂದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್ ಮುಖ್ಯಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್,ಹಿರಿಯ ಉಪನ್ಯಾಸಕರಾದ ಎ.ಆರ್.ಮುಲ್ಲಾ, ಸೋಮಶೇಖರ ನಾಯಕ್, ಜಯಶ್ರೀ.ವಿ.ದಂಬೆಕೋಡಿ, ಮೋಹನ್ ಗೌಡ ಸೇರಿದಂತೆ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ನುಡಿ ಹರೆಯವನ್ನು ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸಮಾಗಮ ನೆರವೇರಿತು.ನೂತನವಾಗಿ ಪ್ರಥಮ ಪಿಯುಸಿಗೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಬಗ್ಗೆ, ಇಲ್ಲಿನ ಸವಲತ್ತುಗಳ ಬಗ್ಗೆ, ಅಳವಡಿಸಿಕೊಳ್ಳಬೇಕಾದ ಶಿಸ್ತಿನ ಬಗ್ಗೆ ಮಾಹಿತಿ ನೀಡಲಾಯಿತು.

ಉಪನ್ಯಾಸಕ ಮೋಹನ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್ ಪ್ರಸ್ತಾಪಿಸಿದರು.ಉಪನ್ಯಾಸಕಿ ಜ್ಯೋತಿ.ಪಿ.ರೈ ವಂದಿಸಿದರು. ಉಪನ್ಯಾಸಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

4 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

6 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago