ಸುಬ್ರಹ್ಮಣ್ಯ:ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ಪದವಿ ಓದುತಿದ್ದ ಭವಿಶ್ ಎಂಬ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಪರಮಲೆ ಪುರುಷೋತ್ತಮ ಗೌಡರ ಪುತ್ರ ಭವಿಶ್ ಪಿ.ಪಿ. ಸುಬ್ರಹ್ಮಣ್ಯ ಕೆ.ಎಸ್.ಎಸ್. ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ. ಮಂಗಳವಾರ ಪರೀಕ್ಷೆ ಮುಗಿಸಿದ ಬಳಿಕ ನಾಪತ್ತೆಯಾಗಿದ್ದ. ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಕಾಲೇಜು ಹಾಗೂ ಆತನ ಸ್ನೇಹಿತರಲ್ಲಿ ವಿಚಾರಿಸಿದಾಗ ಆತ ಮಧ್ಯಾಹ್ನವೇ ಮನೆಗೆ ತೆರಳಿರುವುದಾಗಿ ತಿಳಿದ ಬಳಿಕ ಸಂಜೆ ಹುಡುಕಾಡಿದಾಗ ರಾತ್ರಿ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಮೃತನ ತಂದೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ .
ಮೃತ ವಿದ್ಯಾರ್ಥಿ ತಂದೆ, ತಾಯಿ ಸಹೋದರಿಯನ್ನು ಅಗಲಿದ್ದಾನೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…