Advertisement
ಸುದ್ದಿಗಳು

ಸುಬ್ರಹ್ಮಣ್ಯ: ಗಾಂಗೇಯ ಟ್ರೋಫಿ ಕ್ರಿಕೇಟ್ ಪಂದ್ಯಾಟ ಉದ್ಘಾಟನೆ

Share

ಸುಬ್ರಹ್ಮಣ್ಯ: ಕ್ರಿಕೇಟ್ ಪಂದ್ಯಾಟಗಳು ಗ್ರಾಮೀಣ ಕ್ರೀಡಾಳುಗಳ ಪ್ರತಿಭಾ ಅನಾವರಣಕ್ಕೆ ವೇದಿಕೆ. ಸಮಾಜಮುಖಿ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳುವುದರ ಮೂಲಕ ಯುವಕರು ಕ್ರೀಡಾ ಕ್ಷೇತ್ರಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಪಂದ್ಯಾಟಗಳು ಮಹತ್ತರವಾದುದು. ಕೃಷ್ಣ ಕುಮಾರ್ ರುದ್ರಪಾದ ಅವರು ಸಾಮಾಜಿಕ, ಧಾರ್ಮಿಕ, ಸಮಾಜಮುಖಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಶ್ರೇಷ್ಠ ವ್ಯಕ್ತಿ. ಬಡವರ ಬಗ್ಗೆ ಅತೀವ ಕಾಳಜಿ ಇದ್ದ ಜನಪರ ವ್ಯಕ್ತಿತ್ವದ ಶ್ರೇಷ್ಠ ನಾಯಕತ್ವ ಗುಣ ಹೊಂದಿದ ಕೃಷ್ಣ ಕುಮಾರ್ ಅವರ ನೆನಪಿಗಾಗಿ ನಡೆಸಿದ ಪಂದ್ಯಾಟವು ಶ್ಲಾಘನೀಯ. ಸುಮಾರು 40 ವರ್ಷ ಇತಿಹಾಸ ಹೊಂದಿದ ಗಾಂಗೇಯ ಕ್ರಿಕೇಟ್ ತಂಡ ನಡೆಸಿದ ಈ ಪಂದ್ಯಾಟವು ಯುವಕರ ಕ್ರಿಕೇಟ್ ಆಸಕ್ತಿಯನ್ನು ಉತ್ತೇಜಿಸಲು ವಿಶೇಷ ಅವಕಾಶ ಒದಗಿಸಿದೆ ಎಂದು ಕೆ.ಎಸ್.ಎಸ್.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಕೆ.ಆರ್.ಶೆಟ್ಟಿಗಾರ್ ಹೇಳಿದರು.

ಸುಮಾರು 40 ವರ್ಷ ಇತಿಹಾಸ ಹೊಂದಿರುವ ಸುಬ್ರಹ್ಮಣ್ಯದ ಗಾಂಗೇಯ ಕ್ರಿಕೇಟರ್ಸ್ ಆಶ್ರಯದಲ್ಲಿ ದಿ|| ಕೃಷ್ಣಕುಮಾರ್ ರುದ್ರಪಾದ ಸ್ಮರಣಾರ್ಥವಾಗಿ, ಅವಿಭಜಿತ ದ.ಕ ಮತ್ತು ಕಾಸರಗೋಡು ಜಿಲ್ಲೆಗಳ ಪ್ರತಿಷ್ಠಿತ ಆಯ್ದ 20 ತಂಡಗಳ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟ ಗಾಂಗೇಯ ಟ್ರೋಫಿ-2020ಯ ಉದ್ಘಾಟನಾ ಸಮಾರಂಭದಲ್ಲಿ ಅವರು ದಿಕ್ಸೂಚಿ ಮಾತುಗಳನ್ನಾಡಿದರು. ಕ್ರಿಕೇಟ್ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಾಶಸ್ತ್ಯ ಹೊಂದಿದೆ. ಇದರೊಂದಿಗೆ ಗ್ರಾಮೀಣರು ಆಡುವ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟಗಳನ್ನೂ ಪ್ರೋತ್ಸಾಹಿಸಿ ಬೆಳೆಸುವುದು ಕೂಡಾ ಉತ್ತಮವಾದುದು ಎಂದರು.

ಉದ್ಘಾಟನೆ: ಪಂದ್ಯಾಟವನ್ನು ಕಲಾವಿದ ಮತ್ತು ಗಾಂಗೇಯ ತಂಡದ ಮಾಜಿ ನಾಯಕ ಹರೀಶ್ ಕಾಮತ್ ಉದ್ಘಾಟಿಸಿದರು. ಗಾಂಗೇಯ ತಂಡದ ಸ್ಥಾಪಕ ನಾಯಕ ಎಂ.ಸರ್ವೋತ್ತಮ ಕಾಮತ್ ಬಲೂನ್‍ಗಳನ್ನು ಆಗಸಕ್ಕೆ ಹಾರಿಸುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ಗಾಂಗೇಯ ಕ್ರಿಕೇಟರ್ಸ್‍ನ ಅಧ್ಯಕ್ಷ ರವೀಂದ್ರ ಕುಮಾರ್ ರುದ್ರಪಾದ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಜೇಸಿಸ್ ವಲಯಾಧಿಕಾರಿ ರವಿ ಕಕ್ಕೆಪದವು, ಗ್ರಾ.ಪಂ.ಸದಸ್ಯ ಮೋಹನದಾಸ ರೈ, ಭೂಮಾಪಕ ಪ್ರಸಾದ್ ರೈ, ಕುಲ್ಕುಂದ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿ ಸದಸ್ಯ ರಾಜೇಶ್ ಕಾಶಿಕಟ್ಟೆ, ರೋಟರಿ ಪೂರ್ವಾಧ್ಯಕ್ಷ ಕಿಶೋರ್ ಕುಮಾರ್ ಕೂಜುಗೋಡು, ಮುಖ್ಯಅತಿಥಿಗಳಾಗಿದ್ದರು. ತಂಡದ ನಾಯಕ ಪ್ರಕಾಶ್ ಸುಬ್ರಹ್ಮಣ್ಯ, ಗಾಂಗೇಯ ತಂಡದ ಹಿರಿಯ ಆಟಗಾರರಾದ ಗಿರಿಧರ್ ಸ್ಕಂಧ, ರಾಮಕೃಷ್ಣ ಭಟ್ ನೂಚಿಲ, ಸುಭಾಸ್ ರೈ ಬಾಳಿಲ ವೇದಿಕೆಯಲ್ಲಿದ್ದರು.

ಗೌರವಾರ್ಪಣೆ: ಸಮಾರಂಭದಲ್ಲಿ ಗಾಂಗೇಯ ತಂಡದ ಪ್ರಾರಂಭದ ನಾಯಕ ಎಂ.ಸರ್ವೋತ್ತಮ ಕಾಮತ್ ಮತ್ತು ಗಾಂಗೇಯ ತಂಡದ ಆಟಗಾರ ಮತ್ತು ಹಿರಿಯರ ಅಂತರಾಷ್ಟ್ರೀಯ ಕ್ರೀಡಾಪಟು ಸುಭಾಶ್ ರೈ ಬಾಳಿಲ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಾಂಗೇಯ ತಂಡದ ಹಿರಿಯ ಆಟಗಾರ ರತ್ನಾಕರ.ಎಸ್ ಸ್ವಾಗತಿಸಿದರು. ತಂಡದ ಹಿರಿಯ ಸದಸ್ಯ ಗಿರಿಧರ್ ಸ್ಕಂಧ ಪ್ರಸ್ತಾಪಿಸಿದರು. ತಂಡದ ಸದಸ್ಯ ದೀಪಕ್ ನಂಬಿಯಾರ್ ವಂದಿಸಿದರು.ಚಂದಪ್ಪ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದಲ್ಲಿ ತ್ರಿವಳಿ ಜಿಲ್ಲೆಗಳ ಪ್ರತಿಷ್ಠಿತ ಆಹ್ವಾನಿತ ತಂಡಗಳು ಪ್ರಶಸ್ತಿಗಾಗಿ ಸೆಣೆಸಾಡುತ್ತಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

10 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

11 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

19 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago