ಸುಬ್ರಹ್ಮಣ್ಯ: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲದೆ ಇತರೆ ವಿಭಾಗದಲ್ಲಿ ಕಲಿಯುವ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದುವುದು ಅವಶ್ಯಕ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.
ಸುಬ್ರಹ್ಮಣ್ಯ ಎಸ್ಎಸ್ಪಿಯು ಕಾಲೇಜಿನಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳ ವೃತ್ತಿ ಪರತೆ ಹೆಚ್ಚಿಸಲ ಆಯೋಜಿಸಿದ ಪ್ರಾಥಮಿಕ ಕಂಪ್ಯೂಟರ್ ಶಿಕ್ಷಣ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಂತ್ರಿಕತೆಗೆ ತಮ್ಮನ್ನು ಒಡ್ಡಿಕೊಳ್ಳುವ ಇಂದಿನ ಕಾಲಸ್ಥಿತಿಯಲ್ಲಿ ವಿಜ್ಞಾನ ನ ಕ್ಷೇತ್ರದ ವಿದ್ಯಾರ್ಥಿಗಳು ಮಾತ್ರವೇ ಕಂಪ್ಯೂಟರ್ ಜ್ಞಾನ ಹೊಂದುವುದಲ್ಲ ಇದು ಎಲ್ಲರಿಗೂ ವಿಸ್ತರಿಸಬೇಕಿದೆ ಎಂದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಸಾವಿತ್ರಿ ಕೆ.ಉಪಪ್ರಾಂಶುಪಾಲೆ ರೇಖಾರಾಣಿ, ಉಪನ್ಯಾಸಕರಾದ ಸೋಮಶೇಖರ, ಜಯಶ್ರಿ, ಸುಧಾ, ಸೌಮ್ಯ ಕಂಪ್ಯೂಟರಿ ಶಿಕ್ಷಕಿ ವಿಶಾಲಾಕ್ಷಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel