ಸುಬ್ರಹ್ಮಣ್ಯ: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲದೆ ಇತರೆ ವಿಭಾಗದಲ್ಲಿ ಕಲಿಯುವ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದುವುದು ಅವಶ್ಯಕ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.
ಸುಬ್ರಹ್ಮಣ್ಯ ಎಸ್ಎಸ್ಪಿಯು ಕಾಲೇಜಿನಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳ ವೃತ್ತಿ ಪರತೆ ಹೆಚ್ಚಿಸಲ ಆಯೋಜಿಸಿದ ಪ್ರಾಥಮಿಕ ಕಂಪ್ಯೂಟರ್ ಶಿಕ್ಷಣ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಂತ್ರಿಕತೆಗೆ ತಮ್ಮನ್ನು ಒಡ್ಡಿಕೊಳ್ಳುವ ಇಂದಿನ ಕಾಲಸ್ಥಿತಿಯಲ್ಲಿ ವಿಜ್ಞಾನ ನ ಕ್ಷೇತ್ರದ ವಿದ್ಯಾರ್ಥಿಗಳು ಮಾತ್ರವೇ ಕಂಪ್ಯೂಟರ್ ಜ್ಞಾನ ಹೊಂದುವುದಲ್ಲ ಇದು ಎಲ್ಲರಿಗೂ ವಿಸ್ತರಿಸಬೇಕಿದೆ ಎಂದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಸಾವಿತ್ರಿ ಕೆ.ಉಪಪ್ರಾಂಶುಪಾಲೆ ರೇಖಾರಾಣಿ, ಉಪನ್ಯಾಸಕರಾದ ಸೋಮಶೇಖರ, ಜಯಶ್ರಿ, ಸುಧಾ, ಸೌಮ್ಯ ಕಂಪ್ಯೂಟರಿ ಶಿಕ್ಷಕಿ ವಿಶಾಲಾಕ್ಷಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…