ಸುಬ್ರಹ್ಮಣ್ಯ: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲದೆ ಇತರೆ ವಿಭಾಗದಲ್ಲಿ ಕಲಿಯುವ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಹೊಂದುವುದು ಅವಶ್ಯಕ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.
ಸುಬ್ರಹ್ಮಣ್ಯ ಎಸ್ಎಸ್ಪಿಯು ಕಾಲೇಜಿನಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳ ವೃತ್ತಿ ಪರತೆ ಹೆಚ್ಚಿಸಲ ಆಯೋಜಿಸಿದ ಪ್ರಾಥಮಿಕ ಕಂಪ್ಯೂಟರ್ ಶಿಕ್ಷಣ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಂತ್ರಿಕತೆಗೆ ತಮ್ಮನ್ನು ಒಡ್ಡಿಕೊಳ್ಳುವ ಇಂದಿನ ಕಾಲಸ್ಥಿತಿಯಲ್ಲಿ ವಿಜ್ಞಾನ ನ ಕ್ಷೇತ್ರದ ವಿದ್ಯಾರ್ಥಿಗಳು ಮಾತ್ರವೇ ಕಂಪ್ಯೂಟರ್ ಜ್ಞಾನ ಹೊಂದುವುದಲ್ಲ ಇದು ಎಲ್ಲರಿಗೂ ವಿಸ್ತರಿಸಬೇಕಿದೆ ಎಂದರು.
ಈ ಸಂದರ್ಭ ಕಾಲೇಜು ಪ್ರಾಂಶುಪಾಲೆ ಸಾವಿತ್ರಿ ಕೆ.ಉಪಪ್ರಾಂಶುಪಾಲೆ ರೇಖಾರಾಣಿ, ಉಪನ್ಯಾಸಕರಾದ ಸೋಮಶೇಖರ, ಜಯಶ್ರಿ, ಸುಧಾ, ಸೌಮ್ಯ ಕಂಪ್ಯೂಟರಿ ಶಿಕ್ಷಕಿ ವಿಶಾಲಾಕ್ಷಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…