ಸುದ್ದಿಗಳು

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊಪ್ಪರಿಗೆ ಏರಿತು : ಕ್ಷೇತ್ರದಲ್ಲಿ ಇನ್ನಿಲ್ಲ ಸರ್ಪಸಂಸ್ಕಾರ ಸೇವೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ಭಾನುವಾರ  ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು.  ಕೊಪ್ಪರಿಗೆ ಏರಿದ ಬಳಿಕ ಡಿ.9 ರಂದು ಕೊಪ್ಪರಿಗೆ ಇಳಿಯುವವರೆಗೆ  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಜರುಗುವುದಿಲ್ಲ. ಡಿ.10 ಬಳಿಕ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಜಾತ್ರೋತ್ಸವದ ಸಮಯದಲ್ಲಿ ಇತರ ಸೇವೆಗಳು ಎಂದಿನಂತೆ ನಡೆಯಲಿದೆ. ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಲಕ್ಷದೀಪ ಅಮವಾಸ್ಯೆಯಂದು ಹಾಗೂ ಮಾರ್ಗಶಿರ ಶುದ್ಧ ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಹಾಭಿಷೇಕ ಸೇವೆ ನಡೆಯುವುದಿಲ್ಲ.ಈ ದಿನಗಳಲ್ಲಿ ರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ.

Advertisement

ಜಾತ್ರೋತ್ಸವ:
ನ.25 ಸೋಮವಾರ ಶೇಷವಾಹನಯುಕ್ತ ಬಂಡಿ ಉತ್ಸವ, ನ.26ರಂದು ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದೆ. ನ.27 ಬುಧವಾರ ಶೇಷವಾಹನೋತ್ಸವ, ನ.28 ಗುರುವಾರ ಅಶ್ವವಾಹನೋತ್ಸವ, ನ.29 ಶುಕ್ರವಾರ ಮಯೂರ ವಾಹನೋತ್ಸವ ನಡೆಯಲಿದೆ. ನ.30 ಶನಿವಾರ ಚೌತಿ ಹೂವಿನ ತೇರಿನ ಉತ್ಸವ, ಡಿ.1 ಆದಿತ್ಯವಾರ ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.2 ಸೋಮವಾರ ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.3 ಮಂಗಳವಾರ ಅವಭೃತೋತ್ಸವ ಮತ್ತು ನೌಕವಿಹಾರ, ಡಿ.9 ಸೋಮವಾರ ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

24 minutes ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

1 hour ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

1 hour ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

11 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago