ಕೊಪ್ಪರಿಗೆ ಏರುವ ಸಂದರ್ಭ ಪೂಜಾ ಕಾರ್ಯ
ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ಭಾನುವಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು. ಕೊಪ್ಪರಿಗೆ ಏರಿದ ಬಳಿಕ ಡಿ.9 ರಂದು ಕೊಪ್ಪರಿಗೆ ಇಳಿಯುವವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಜರುಗುವುದಿಲ್ಲ. ಡಿ.10 ಬಳಿಕ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಜಾತ್ರೋತ್ಸವದ ಸಮಯದಲ್ಲಿ ಇತರ ಸೇವೆಗಳು ಎಂದಿನಂತೆ ನಡೆಯಲಿದೆ. ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಲಕ್ಷದೀಪ ಅಮವಾಸ್ಯೆಯಂದು ಹಾಗೂ ಮಾರ್ಗಶಿರ ಶುದ್ಧ ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಹಾಭಿಷೇಕ ಸೇವೆ ನಡೆಯುವುದಿಲ್ಲ.ಈ ದಿನಗಳಲ್ಲಿ ರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ.
ಜಾತ್ರೋತ್ಸವ:
ನ.25 ಸೋಮವಾರ ಶೇಷವಾಹನಯುಕ್ತ ಬಂಡಿ ಉತ್ಸವ, ನ.26ರಂದು ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದೆ. ನ.27 ಬುಧವಾರ ಶೇಷವಾಹನೋತ್ಸವ, ನ.28 ಗುರುವಾರ ಅಶ್ವವಾಹನೋತ್ಸವ, ನ.29 ಶುಕ್ರವಾರ ಮಯೂರ ವಾಹನೋತ್ಸವ ನಡೆಯಲಿದೆ. ನ.30 ಶನಿವಾರ ಚೌತಿ ಹೂವಿನ ತೇರಿನ ಉತ್ಸವ, ಡಿ.1 ಆದಿತ್ಯವಾರ ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.2 ಸೋಮವಾರ ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.3 ಮಂಗಳವಾರ ಅವಭೃತೋತ್ಸವ ಮತ್ತು ನೌಕವಿಹಾರ, ಡಿ.9 ಸೋಮವಾರ ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…