ಕೊಪ್ಪರಿಗೆ ಏರುವ ಸಂದರ್ಭ ಪೂಜಾ ಕಾರ್ಯ
ಸುಬ್ರಹ್ಮಣ್ಯ: ಕಾರ್ತಿಕ ಬಹುಳ ದ್ವಾದಶಿಯಾದ ಭಾನುವಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಕೊಪ್ಪರಿಗೆ ಏರುವುದರೊಂದಿಗೆ ವಾರ್ಷಿಕ ಜಾತ್ರೋತ್ಸವ ಆರಂಭವಾಯಿತು. ಕೊಪ್ಪರಿಗೆ ಏರಿದ ಬಳಿಕ ಡಿ.9 ರಂದು ಕೊಪ್ಪರಿಗೆ ಇಳಿಯುವವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಜರುಗುವುದಿಲ್ಲ. ಡಿ.10 ಬಳಿಕ ಸರ್ಪಸಂಸ್ಕಾರ ಸೇವೆ ಆರಂಭವಾಗಲಿದೆ. ಜಾತ್ರೋತ್ಸವದ ಸಮಯದಲ್ಲಿ ಇತರ ಸೇವೆಗಳು ಎಂದಿನಂತೆ ನಡೆಯಲಿದೆ. ಚಂಪಾಷಷ್ಠಿ ದಿನ ಆಶ್ಲೇಷಾ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ. ಲಕ್ಷದೀಪ ಅಮವಾಸ್ಯೆಯಂದು ಹಾಗೂ ಮಾರ್ಗಶಿರ ಶುದ್ಧ ಚೌತಿ, ಪಂಚಮಿ ಮತ್ತು ಷಷ್ಠಿಯಂದು ಮಹಾಭಿಷೇಕ ಸೇವೆ ನಡೆಯುವುದಿಲ್ಲ.ಈ ದಿನಗಳಲ್ಲಿ ರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ.
ಜಾತ್ರೋತ್ಸವ:
ನ.25 ಸೋಮವಾರ ಶೇಷವಾಹನಯುಕ್ತ ಬಂಡಿ ಉತ್ಸವ, ನ.26ರಂದು ಮಂಗಳವಾರ ಲಕ್ಷದೀಪೋತ್ಸವ ನಡೆಯಲಿದೆ. ನ.27 ಬುಧವಾರ ಶೇಷವಾಹನೋತ್ಸವ, ನ.28 ಗುರುವಾರ ಅಶ್ವವಾಹನೋತ್ಸವ, ನ.29 ಶುಕ್ರವಾರ ಮಯೂರ ವಾಹನೋತ್ಸವ ನಡೆಯಲಿದೆ. ನ.30 ಶನಿವಾರ ಚೌತಿ ಹೂವಿನ ತೇರಿನ ಉತ್ಸವ, ಡಿ.1 ಆದಿತ್ಯವಾರ ಮಾರ್ಗಶಿರ ಶುದ್ಧ ಪಂಚಮಿ ದಿನ ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.2 ಸೋಮವಾರ ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ. ಡಿ.3 ಮಂಗಳವಾರ ಅವಭೃತೋತ್ಸವ ಮತ್ತು ನೌಕವಿಹಾರ, ಡಿ.9 ಸೋಮವಾರ ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ.ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ ದೈವಗಳ ನಡಾವಳಿ ನಡೆಯಲಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…