Advertisement
ಸುದ್ದಿಗಳು

ಸುಬ್ರಹ್ಮಣ್ಯ ದೇವಸ್ಥಾನ -ಮಠ ವಿವಾದ : ಸುಬ್ರಹ್ಮಣ್ಯ ವಿಹಿಂಪ – ಜಿಲ್ಲಾ ವಿಹಿಂಪ ಭಿನ್ನ ನಿಲುವು….?

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ಚರ್ಚೆ, ವಿವಾದ, ಮಾತುಕತೆಗಳು ನಡೆಯುತ್ತಿವೆ. ಕಾರಣ ಸರ್ಪಸಂಸ್ಕಾರ ಸೇವೆ.

ಈ ವಿವಾದ ತೀವ್ರ ಸ್ವರೂಪ ಪಡೆಯುವ ವೇಳೆ ವಿಶ್ವ ಹಿಂದೂ ಪರಿಷದ್ ಪ್ರವೇಶ ಪಡೆದು ರಾಜಿಯಲ್ಲಿ ಮುಗಿಸುವ ಹಂತಕ್ಕೆ ಬಂದಾಗ ಜಿಲ್ಲಾ ವಿಶ್ವಹಿಂದೂ ಪರಿಷದ್ ಮಠದ ಪರವಾಗಿ ನಿಂತು ಮಾತುಕತೆ ನಡೆಸಿತು.

ಇದೀಗ ಕುಕ್ಕೆ ಸುಬ್ರಹ್ಮಣ್ಯದ ಸ್ಥಾನೀಯ ವಿಶ್ವಹಿಂದೂ ಪರಿಷದ್ ಮುಖಂಡರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪರವಾಗಿ ನಿಂತು ಸುದ್ದಿಗೋಷ್ಠಿಯಲ್ಲಿ  ಕಾಣಿಸಿಕೊಂಡಿದ್ದಾರೆ ಮಾತ್ರವಲ್ಲ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಸಂಘಪರಿವಾರದಲ್ಲಿ ಗುರುತಿಸಿಕೊಂಡಿದ್ದ ಕಿಶೋರ್ ಶಿರಾಡಿ ದೇವಸ್ಥಾನ ಪರ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ್ದಾರೆ.

ಇಷ್ಟೆಲ್ಲಾ ವಿವಾದವಾದಾಗಲೂ ಸಂಘ ಪರಿವಾರದ ಹಿರಿಯರು ಮಧ್ಯಸ್ಥಿಕೆಗೆ ಮುಂದಾಗಲಿಲ್ಲ. ಆದರೆ ವಿ ಹಿಂ ಪ ಮಾತ್ರಾ ಸ್ಥಳೀಯ ಘಟಕ ಹಾಗೂ ಜಿಲ್ಲಾ ಘಟಕದ ನಡುವೆ ಅಭಿಪ್ರಾಯ ವ್ಯತ್ಯಾಸ ಇರುವುದು ಸ್ಟಷ್ಟವಾಗಿದೆ.

ಕಳೆದ ಕೆಲವು ಸಮಯಗಳಿಂದ ಸಂಘ ಪರಿವಾರದ ನಿಲುವಿನಲ್ಲಿ ವ್ಯತ್ಯಾಸ ಕಾಣುತ್ತಿದೆ. ಜಾತಿ ರಹಿತ, ಹಿಂದೂ ಸಮಾಜ ಎನ್ನುವ ಸಿದ್ಧಾಂತ ಈಗ ದೂರವಾಗುತ್ತಿದೆಯೇ ಎಂಬ ಪ್ರಶ್ನೆ ಕಾರ್ಯಕರ್ತರಲ್ಲಿ ಮೂಡಿದೆ. ಸುಬ್ರಹ್ಮಣ್ಯದ ವಿಚಾರದಲ್ಲೂ ಮಠದ ಪರವಾಗಿ ವಿ ಹಿಂ ಪ ಜಿಲ್ಲಾ ಸಮಿತಿ ಮಾತನಾಡಿದರೆ  ಸ್ಥಳೀಯ ವಿ ಹಿಂಪ ದೇವಸ್ಥಾನದ ಪರವಾಗಿ ಮಾತನಾಡಲು ಕಾರಣವೇನು ? ಎಂಬುದು ಸಾಮಾನ್ಯ ಕಾರ್ಯಕರ್ತರಲ್ಲೂ ಚಿಂತನೆಗೆ ಕಾರಣವಾಗುತ್ತದೆ.

ದಕ್ಷಿಣ ಕನ್ನಡದಲ್ಲಿ ಸಂಘ ಪರಿವಾರದ ಇತ್ತೀಚೆಗಿನ ನಡೆಗಳು ತೀವ್ರ ಚರ್ಚೆಗೆ ಕಾರಣವಾಗುತ್ತಿದೆ. ಒಂದು ಸಮುದಾಯದ ಕಡೆಗೆ ಓಲೈಕೆ, ಕೆಲವು ನಿರ್ಧಾರಗಳಲ್ಲಿ ತಾರತಮ್ಯ ಸೇರಿದಂತೆ ವಿವಿಧ ಘಟನೆಗಳ ಬಗ್ಗೆ ಈಗ ಚರ್ಚೆಯಾಗುತ್ತಿದೆ.  ಕೆಲವು ಸಮಯದ ಹಿಂದೆ ಡಿ ಸಿ ಸಿ ಬ್ಯಾಂಕ್ ಚುನಾವಣೆಯ ಸಂದರ್ಭ ನಡೆದ ಅಡ್ಡ ಮತದಾನ , ಈ ಸಂದರ್ಭ ಸಹಕಾರ ಭಾರತಿ ನಡೆ, ಸಂಘ ಪರಿವಾರದ ನಿರ್ಧಾರಗಳು, ಚುನಾವಣೆಯ ಸಂದರ್ಭ ಬಿಜೆಪಿ ನಡೆ ಇದರಲ್ಲೂ ಸಂಘ ಪರಿವಾರದ ನಡೆಗಳು ಚರ್ಚೆಗೆ ಕಾರಣವಾದರೆ ಇಂತಹ ಹಲವು ಸಂಗತಿಗಳು ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗುತ್ತಿದೆ. ಈಗ ಅದೇ ಸಾಲಿಗೆ ಕುಕ್ಕೆ ಸುಬ್ರಹ್ಮಣ್ಯದ ವಿವಾದವೂ ಸೇರಿಕೊಂಡಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

8 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

12 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

20 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

22 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

23 hours ago