Advertisement

ಸುಬ್ರಹ್ಮಣ್ಯ ದೇವಸ್ಥಾನ-ಮಠ ವಿವಾದ : ಸುಳ್ಳು ಕೇಸುಗಳ ಬಗ್ಗೆ ವಿಮರ್ಶೆಗೆ ಮಾಜಿ ಟ್ರಸ್ಟಿಗಳ ಸಭೆ ನಡೆಸಲು ನಿರ್ಧಾರ

Share

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಅನಧಿಕೃತ ಪೂಜೆ ನಡೆಸುವುದು, ದೇವಸ್ಥಾನಕ್ಕೆ ಬರುವ ಭಕ್ತರನ್ನು ದಾರಿ ತಪ್ಪಿಸಿ ಮಠದಲ್ಲಿ ಹಾಗೂ ಖಾಸಗಿ ಸ್ಥಳಗಳಲ್ಲಿ ಮಾಡುವುದು, ಬೇರೆ ಕಡೆ ಪೂಜೆ ಮಾಡಲು ಪ್ರೇರಣೆ ನೀಡುವ ವ್ಯಕ್ತಿಗಳನ್ನು ವಿರೋಧಿಸಿದ್ದಕ್ಕೆ ಮಠದ ಬೆಂಬಲಿಗರು ಎನಿಸಿಕೊಂಡವರು ಸುಳ್ಳು ಕೇಸು ದಾಖಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಟ್ರಸ್ಟಿಗಳ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿ ತಿಳಿಸಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು  ಬೌದ್ಧಿಕ ಮತ್ತು ಆಧ್ಯಾತ್ಮಿಕ ನೆಲೆಯಲ್ಲಿ ಕಾನೂನು ಚೌಕಟ್ಟಿನೊಳಗೆ ಹೋರಾಟ ನಡೆಸಲು ದೇಗುಲದ ಮಾಜಿ ಟ್ರಸ್ಟಿಗಳು, ದೇವಸ್ಥಾನದ ಹಿತ ಬಯಸುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಾಗೂ ದೇವಸ್ಥಾನದ ಭಕ್ತರ ಸಭೆಯನ್ನು ಅ.5 ರಂದು ಸುಬ್ರಹ್ಮಣ್ಯ ದೇವಸ್ಥಾನದ ಉತ್ತರಾಧಿ ಮಠದಲ್ಲಿ ಕರೆಯಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭಕ್ತರ ಹಿತಾರಕ್ಷಣಾ ವೇದಿಕೆ ತಾಲೂಕು ಸಮಿತಿ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ ಎಂದು ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯವ ಪ್ರಮುಖ ಸೇವೆಗಳನ್ನು ಮಠ ಹಾಗೂ ಖಾಸಗಿ ಸ್ಥಳಗಳಲ್ಲಿ ನಡೆಸುತ್ತಿರುವುದು ಸರಿಯಲ್ಲ. ಇದರಿಂದ ಅಹಿತಕರ ಘಟನೆಗಳಿಗೆ ಎಡೆ ಮಾಡಿ ಕೊಡುತ್ತಿದೆ. ದೇವಸ್ಥಾನಕ್ಕೆ ಸೇವೆ ಸಲ್ಲಿಸಲು ಬರುವ ಭಕ್ತರನ್ನು ದಾರಿ ತಪ್ಪಿಸಿ ಖಾಸಗಿಯಾಗಿ ನಡೆಸುವುದು ತಪ್ಪು. ಅದು ಮಠ, ಮನೆ ಅಥವಾ ಖಾಸಗಿ ಸ್ಥಳವೇ ಆಗಿದ್ದರೂ ಅದನ್ನು ವಿರೋಧಿಸುತ್ತೇವೆ. ಅನಾಧಿಕೃತ ಸೇವೆ ನಡೆಸುವುದಷ್ಟೆ ಅಲ್ಲ ಅನಧಿಕೃತವಾಗಿ ಬೇರೆ ಕಡೆ ಪೂಜೆ ನಡೆಸುವಂತೆ ಪ್ರೇರೆಪಿಸುವುದು ಕೂಡ ತಪ್ಪು ಹೀಗಾಗಿ ಇದೆಲ್ಲವನ್ನು ನಿಲ್ಲಿಸುವ ವ್ಯವಸ್ಥೆ ಆಗಬೇಕು ಎಂದು ಆಗ್ರಹಿಸಿದರು.

ಮಠದಲ್ಲಿ ನಡೆಯುತ್ತಿರುವ ಅನಧಿಕೃತ ಪೂಜೆ ವಿರುದ್ಧ ಧ್ವನಿ ಎತ್ತಿದವರ ಮತ್ತು ದೇವಸ್ಥಾನದ ಪರವಿರುವ ಕೆಲ ಮಾಜಿ ಟ್ರಸ್ಟಿಗಳ ವಿರುದ್ಧ ರಾಜಕೀಯ ಒತ್ತಡ ತಂದು ಸುಳ್ಳು ಕೇಸು ಹಾಕುತ್ತಿರುವುದು ಮಠದವರಿಗೆ ಶೋಭೆ ತರುವಂತದಲ್ಲ, ಹಿಂದೂ ದೇವಸ್ಥಾನದ ಉಳಿತಿಗಾಗಿ ಹೋರಾಟ ನಡೆಸುತ್ತಿರುವವರ ವಿರುದ್ಧ ಈ ರೀತಿ ಸುಳ್ಳು ಕೇಸು ದಾಖಲಿಸಿ ಮಟ್ಟ ಹಾಕುವುದು ಗಂಭೀರ ವಿಚಾರ. ಮುಂದೆ ದೇವಸ್ಥಾನದ ಪರ ಮಾತನಾಡುವುದೇ ತಪ್ಪು ಎನ್ನುವ ಭಾವನೆಯೂ ಉಂಟಾಗುವುದು. ಇದು ಆತಂಕಕಾರ ಬೆಳವಣಿಗೆ. ನಿರಂತರವಾಗಿ ಕೇಸು ದಾಖಲಿಸುವುದು, ಲಾಯರ್ ನೊಟೀಸ್ ನೀಡುವುದು ಹೋರಾಟವನ್ನು ಹತ್ತಿಕ್ಕುವ ಷಡ್ಯಂತ್ರ ಎಂದು ಹೇಳಿದರು. ಈ ನಿಟ್ಟಿನಲ್ಲಿ ಅ.5 ರಂದು ನಡೆಯುವ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಗುವುದು. ಪಕ್ಷಭೇಧ ಮರೆತು ಎಲ್ಲ ಮಾಜಿ ಟ್ರಸ್ಟಿಗಳು ಅಂದಿನ ಸಭೆಯಲ್ಲಿ ಪಾಲ್ಗೋಳ್ಳಲು ವಿನಂತಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಮೋನಪ್ಪ ಮಾನಾಡು, ಜಯಪ್ರಕಾಶ ಕೂಜುಗೋಡು ಮತ್ತು ಹಿಂದೂ ಮುಖಂಡ ಅಶೋಕ ಆಚಾರ್ಯ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

7 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

7 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

21 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

21 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago