Advertisement
ಸುದ್ದಿಗಳು

ಸುಬ್ರಹ್ಮಣ್ಯ ದೇವಸ್ಥಾನ – ಸಂಪುಟ ನರಸಿಂಹ ಮಠ: ಮುಗಿಯದ ಸಂಘರ್ಷ : ಜೂ.10 ರ ಮೊದಲು ಮತ್ತೆ ಸಭೆ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ಸರ್ಪಸಂಸ್ಕಾರ ಸೇವೆ ಸೇರಿದಂತೆ ಉಂಟಾಗಿರುವ ಭಿನ್ನಾಭಿಪ್ರಾಯ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ  ಸುಬ್ರಹ್ಮಣ್ಯದಲ್ಲಿ ಶುಕ್ರವಾರ  ನಡೆದ ಸಭೆಯಲ್ಲೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗದೆ ಜೂ.11 ರ ಮೊದಲು ಮತ್ತೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಅದಕ್ಕೂ ಮುನ್ನ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಲು ಉದ್ದೇಶಿಸಲಾಗಿದೆ.

Advertisement
Advertisement
Advertisement
Advertisement
Advertisement

ಸಂಜೆ 4 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿದ ಪೇಜಾವರ ಶ್ರೀಗಳು   ಸುಬ್ರಹ್ಮಣ್ಯ ದೇವರ ದರ್ಶನ ನಡೆಸಿದ  ಬಳಿಕ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಜೊತೆ  ಚರ್ಚೆ ನಡೆಸಿದ್ದಾರೆ.ಈ ವೇಳೆ ವಿಶ್ವ  ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರೂ ಸ್ವಾಮೀಜಿ ಗೆ ಸಾಥ್ ನೀಡಿದ್ದರು. ಆ ಬಳಿಕ ಸಭೆ ನಡೆಯಿತು. ಭಕ್ತರು ಹಾಗೂ ದೇವಸ್ಥಾನದ ಪ್ರಮುಖರು  ಭಾಗವಹಿಸಿದ್ದರು.

Advertisement

ಮಠದ ಜೊತೆಗಿನ ಚರ್ಚೆ ಬಳಿಕ ‌ಕ್ಷೇತ್ರದ ಕಚೇರಿಯಲ್ಲಿ ಎರಡೂ ಕಡೆಯನ್ನು ಕೂರಿಸಿ ಸಂಧಾನ ನಡೆಸಲು ಪ್ರಯತ್ನಿಸಿದ್ದಾರೆ.ಈ ವೇಳೆ ಎರಡೂ ಕಡೆಯ ನಾಯಕರಿಂದ ವಾದ –  ಪ್ರತಿವಾದ ಚರ್ಚೆ ನಡೆದಿದ್ದರಿಂದ ಪೇಜಾವರ ಶ್ರೀ ಸಂಧಾನ ಸಭೆ ಮೊಟಕುಗೊಳಿಸಿ ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ಸಭೆ ಕರೆದು ನಿರ್ಧಾರ ಪ್ರಕಟಿಸಿದರು. ಕ್ಷೇತ್ರದ ಆಡಳಿತ ಮಂಡಳಿ ಮತ್ತು ಮಠದ ಮುಖಂಡರು ಈ ಸಂಧಾನ ಸಭೆ ಗೆ ಒಪ್ಪಿಕೊಂಡಿದ್ದು,ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ವಿಹಿಂಪ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಮಠದ ಪ್ರಮುಖರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಭಕ್ತರು ಇದ್ದರು.

Advertisement

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಂಭಮೇಳ | ಕುಂಭಸ್ನಾನ ಮುಗಿಸಿ ಹೊರಟಾಗ….

ಮುಖ್ಯ ರಸ್ತೆಗೆ ಸೇರಲು ಎಂಟತ್ತು‌ ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ…

55 mins ago

ಮಹಾಲಕ್ಷ್ಮಿ ರಾಜಯೋಗವು ಯಾವ ರಾಶಿಗಳಿಗೆ…?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರೈತರಿಗೆ ಊರುಗೋಲಾಗಿರುವ ಕೃಷಿ ಪತ್ತಿನ ಸಹಕಾರಿ ಸಂಘ

ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ…

11 hours ago

ಎತ್ತಿನಹೊಳೆ ಕಾಮಗಾರಿ | ಅರಣ್ಯ ಭೂಮಿ ಬಳಕೆಗೆ ಅನುಮತಿ ಕೋರಿಕೆ | ಮಾ.18 ರಂದು ದೆಹಲಿಗೆ ಉಪಮುಖ್ಯಮಂತ್ರಿ

ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.

11 hours ago

ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ…

1 day ago

ಸಹಕಾರಿ ಕ್ಷೇತ್ರಕ್ಕೂ ಬರಬಹುದಾ ಸಿಬಿಲ್..?‌ | ಹಾಗಿದ್ದರೆ ಸಿಬಿಲ್ ಅಂಕ ಹೆಚ್ಚಿಸುವುದು ಹೇಗಪ್ಪಾ…?

ಸದ್ಯ ಬ್ಯಾಂಕಿಂಗ್ ಕ್ಷೇತ್ರದಲ್ಲಷ್ಟೇ ಸಿಬಿಲ್ ಮಾಹಿತಿ ಕೇಳಲಾಗ್ತಿದೆ.ಆದರೆ ಶೀಘ್ರವಾಗಿ‌ ಸಹಕಾರಿ ಕ್ಷೇತ್ರದಲ್ಲೂ ಸಿಬಿಲ್…

1 day ago