Advertisement
ಸುದ್ದಿಗಳು

ಸುಬ್ರಹ್ಮಣ್ಯ ದೇವಸ್ಥಾನ – ಸಂಪುಟ ನರಸಿಂಹ ಮಠ: ಮುಗಿಯದ ಸಂಘರ್ಷ : ಜೂ.10 ರ ಮೊದಲು ಮತ್ತೆ ಸಭೆ

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ಸರ್ಪಸಂಸ್ಕಾರ ಸೇವೆ ಸೇರಿದಂತೆ ಉಂಟಾಗಿರುವ ಭಿನ್ನಾಭಿಪ್ರಾಯ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ  ಸುಬ್ರಹ್ಮಣ್ಯದಲ್ಲಿ ಶುಕ್ರವಾರ  ನಡೆದ ಸಭೆಯಲ್ಲೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗದೆ ಜೂ.11 ರ ಮೊದಲು ಮತ್ತೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಅದಕ್ಕೂ ಮುನ್ನ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಲು ಉದ್ದೇಶಿಸಲಾಗಿದೆ.

ಸಂಜೆ 4 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿದ ಪೇಜಾವರ ಶ್ರೀಗಳು   ಸುಬ್ರಹ್ಮಣ್ಯ ದೇವರ ದರ್ಶನ ನಡೆಸಿದ  ಬಳಿಕ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಜೊತೆ  ಚರ್ಚೆ ನಡೆಸಿದ್ದಾರೆ.ಈ ವೇಳೆ ವಿಶ್ವ  ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರೂ ಸ್ವಾಮೀಜಿ ಗೆ ಸಾಥ್ ನೀಡಿದ್ದರು. ಆ ಬಳಿಕ ಸಭೆ ನಡೆಯಿತು. ಭಕ್ತರು ಹಾಗೂ ದೇವಸ್ಥಾನದ ಪ್ರಮುಖರು  ಭಾಗವಹಿಸಿದ್ದರು.

ಮಠದ ಜೊತೆಗಿನ ಚರ್ಚೆ ಬಳಿಕ ‌ಕ್ಷೇತ್ರದ ಕಚೇರಿಯಲ್ಲಿ ಎರಡೂ ಕಡೆಯನ್ನು ಕೂರಿಸಿ ಸಂಧಾನ ನಡೆಸಲು ಪ್ರಯತ್ನಿಸಿದ್ದಾರೆ.ಈ ವೇಳೆ ಎರಡೂ ಕಡೆಯ ನಾಯಕರಿಂದ ವಾದ –  ಪ್ರತಿವಾದ ಚರ್ಚೆ ನಡೆದಿದ್ದರಿಂದ ಪೇಜಾವರ ಶ್ರೀ ಸಂಧಾನ ಸಭೆ ಮೊಟಕುಗೊಳಿಸಿ ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ಸಭೆ ಕರೆದು ನಿರ್ಧಾರ ಪ್ರಕಟಿಸಿದರು. ಕ್ಷೇತ್ರದ ಆಡಳಿತ ಮಂಡಳಿ ಮತ್ತು ಮಠದ ಮುಖಂಡರು ಈ ಸಂಧಾನ ಸಭೆ ಗೆ ಒಪ್ಪಿಕೊಂಡಿದ್ದು,ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಭೆಯಲ್ಲಿ ವಿಹಿಂಪ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಮಠದ ಪ್ರಮುಖರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಭಕ್ತರು ಇದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

41 minutes ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

8 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

15 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

16 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

17 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

23 hours ago