ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ಸರ್ಪಸಂಸ್ಕಾರ ಸೇವೆ ಸೇರಿದಂತೆ ಉಂಟಾಗಿರುವ ಭಿನ್ನಾಭಿಪ್ರಾಯ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ನಡೆದ ಸಭೆಯಲ್ಲೂ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗದೆ ಜೂ.11 ರ ಮೊದಲು ಮತ್ತೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಅದಕ್ಕೂ ಮುನ್ನ ಮತ್ತೊಮ್ಮೆ ಅಭಿಪ್ರಾಯ ಸಂಗ್ರಹಿಸಲು ಉದ್ದೇಶಿಸಲಾಗಿದೆ.
ಸಂಜೆ 4 ಗಂಟೆಗೆ ಕ್ಷೇತ್ರಕ್ಕೆ ಆಗಮಿಸಿದ ಪೇಜಾವರ ಶ್ರೀಗಳು ಸುಬ್ರಹ್ಮಣ್ಯ ದೇವರ ದರ್ಶನ ನಡೆಸಿದ ಬಳಿಕ ಸಂಪುಟ ನರಸಿಂಹ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಜೊತೆ ಚರ್ಚೆ ನಡೆಸಿದ್ದಾರೆ.ಈ ವೇಳೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಮುಖಂಡರೂ ಸ್ವಾಮೀಜಿ ಗೆ ಸಾಥ್ ನೀಡಿದ್ದರು. ಆ ಬಳಿಕ ಸಭೆ ನಡೆಯಿತು. ಭಕ್ತರು ಹಾಗೂ ದೇವಸ್ಥಾನದ ಪ್ರಮುಖರು ಭಾಗವಹಿಸಿದ್ದರು.
ಮಠದ ಜೊತೆಗಿನ ಚರ್ಚೆ ಬಳಿಕ ಕ್ಷೇತ್ರದ ಕಚೇರಿಯಲ್ಲಿ ಎರಡೂ ಕಡೆಯನ್ನು ಕೂರಿಸಿ ಸಂಧಾನ ನಡೆಸಲು ಪ್ರಯತ್ನಿಸಿದ್ದಾರೆ.ಈ ವೇಳೆ ಎರಡೂ ಕಡೆಯ ನಾಯಕರಿಂದ ವಾದ – ಪ್ರತಿವಾದ ಚರ್ಚೆ ನಡೆದಿದ್ದರಿಂದ ಪೇಜಾವರ ಶ್ರೀ ಸಂಧಾನ ಸಭೆ ಮೊಟಕುಗೊಳಿಸಿ ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ಸಭೆ ಕರೆದು ನಿರ್ಧಾರ ಪ್ರಕಟಿಸಿದರು. ಕ್ಷೇತ್ರದ ಆಡಳಿತ ಮಂಡಳಿ ಮತ್ತು ಮಠದ ಮುಖಂಡರು ಈ ಸಂಧಾನ ಸಭೆ ಗೆ ಒಪ್ಪಿಕೊಂಡಿದ್ದು,ಜೂನ್ ಹತ್ತರೊಳಗೆ ಮಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯಲ್ಲಿ ವಿಹಿಂಪ ಮುಖಂಡರು, ದೇವಸ್ಥಾನದ ಆಡಳಿತ ಮಂಡಳಿ ಪ್ರಮುಖರು, ಮಠದ ಪ್ರಮುಖರು ಹಾಗೂ ಕುಕ್ಕೆ ಸುಬ್ರಹ್ಮಣ್ಯ ಭಕ್ತರು ಇದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…