Advertisement
ಸುದ್ದಿಗಳು

ಸುಬ್ರಹ್ಮಣ್ಯ: ನೂತನ ಬ್ರಹ್ಮರಥ ಆಗಮನದ ವೇಳೆ ಸುಬ್ರಹ್ಮಣ್ಯ ಶ್ರೀಗಳಿಗೆ ಆಹ್ವಾನದ ಚರ್ಚೆ..!

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥವು ಅ.2 ರಂದು ತಲುಪಲಿದೆ. ಈ ಸಂದರ್ಭ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಚರ್ಚೆ ಈಗ ಸಾಮಾಜಿಕ ಜಾಲತಾಣದಲ್ಲಿ ಕಂಡುಬರುತ್ತಿದೆ. ಕಳೆದ ಎರಡು ದಿನಗಳಿಂದ ಈ ಚರ್ಚೆ ನಡೆಯುತ್ತಿದೆ.

Advertisement

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಾನಿಗಳಿಂದ ಹಾಗೂ ಭಕ್ತರಿಂದ ನೂತನ ಬ್ರಹ್ಮರಥ ಸಮರ್ಪಣೆಯಾಗಲಿದೆ. ಈಗಾಗಲೇ ಕೋಟೇಶ್ವರದಲ್ಲಿ  ನೂತನ ಬ್ರಹ್ಮರಥ ನಿರ್ಮಾಣಗೊಂಡು ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದ್ದು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಲಿದೆ. ಇದಕ್ಕಾಗಿ ಈಗಾಗಲೇ ಪೂರ್ವಬಾವಿ ಸಭೆಯೂ ನಡೆದಿದೆ. ಅದ್ದೂರಿಯಾಗಿ ಸ್ವಾಗತ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ ಇದೀಗ ಚರ್ಚೆಯಾಗುತ್ತಿರುವುದು  ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಬಗ್ಗೆ. ಧಾರ್ಮಿಕವಾಗಿ ಸ್ವಾಮೀಜಿಗಳಿಗೆ ಆದ್ಯತೆ ನೀಡಲಾಗುತ್ತದೆಯಾದರೂ ಸುಬ್ರಹ್ಮಣ್ಯದಲ್ಲಿ ಈ ಬಗ್ಗೆ ಯಾವ ನಿರ್ಧಾರಗಳಾಗುತ್ತವೆ ಎಂಬುದು ಚರ್ಚೆಯ ವಿಷಯವಾಗಿದೆ.

ಕಳೆದ ಹಲವಾರು ಸಮಯಗಳಿಂದ ದೇವಸ್ಥಾನದ ಭಕ್ತರು ಹಾಗೂ ಸಂಪುಟ ನರಸಿಂಹ ಮಠದ ನಡುವೆ ಸರ್ಪಸಂಸ್ಕಾರದ ಕಾರಣಕ್ಕಾಗಿ ಚರ್ಚೆ, ವಾದಗಳು ನಡೆಯುತ್ತಿದ್ದವು. ಈ ಕಾರಣದಿಂದ ನ್ಯಾಯಾಲಯದಿಂದ ನೋಟೀಸ್ ಜಾರಿ, ಪೊಲೀಸ್ ಠಾಣೆಯಲ್ಲಿ ಕೇಸು ಇತ್ಯಾದಿಗಳು ನಡೆದಿತ್ತು. ಹೀಗಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago