ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥವು ಅ.2 ರಂದು ತಲುಪಲಿದೆ. ಈ ಸಂದರ್ಭ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಚರ್ಚೆ ಈಗ ಸಾಮಾಜಿಕ ಜಾಲತಾಣದಲ್ಲಿ ಕಂಡುಬರುತ್ತಿದೆ. ಕಳೆದ ಎರಡು ದಿನಗಳಿಂದ ಈ ಚರ್ಚೆ ನಡೆಯುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಾನಿಗಳಿಂದ ಹಾಗೂ ಭಕ್ತರಿಂದ ನೂತನ ಬ್ರಹ್ಮರಥ ಸಮರ್ಪಣೆಯಾಗಲಿದೆ. ಈಗಾಗಲೇ ಕೋಟೇಶ್ವರದಲ್ಲಿ ನೂತನ ಬ್ರಹ್ಮರಥ ನಿರ್ಮಾಣಗೊಂಡು ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದ್ದು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಲಿದೆ. ಇದಕ್ಕಾಗಿ ಈಗಾಗಲೇ ಪೂರ್ವಬಾವಿ ಸಭೆಯೂ ನಡೆದಿದೆ. ಅದ್ದೂರಿಯಾಗಿ ಸ್ವಾಗತ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ ಇದೀಗ ಚರ್ಚೆಯಾಗುತ್ತಿರುವುದು ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಬಗ್ಗೆ. ಧಾರ್ಮಿಕವಾಗಿ ಸ್ವಾಮೀಜಿಗಳಿಗೆ ಆದ್ಯತೆ ನೀಡಲಾಗುತ್ತದೆಯಾದರೂ ಸುಬ್ರಹ್ಮಣ್ಯದಲ್ಲಿ ಈ ಬಗ್ಗೆ ಯಾವ ನಿರ್ಧಾರಗಳಾಗುತ್ತವೆ ಎಂಬುದು ಚರ್ಚೆಯ ವಿಷಯವಾಗಿದೆ.
ಕಳೆದ ಹಲವಾರು ಸಮಯಗಳಿಂದ ದೇವಸ್ಥಾನದ ಭಕ್ತರು ಹಾಗೂ ಸಂಪುಟ ನರಸಿಂಹ ಮಠದ ನಡುವೆ ಸರ್ಪಸಂಸ್ಕಾರದ ಕಾರಣಕ್ಕಾಗಿ ಚರ್ಚೆ, ವಾದಗಳು ನಡೆಯುತ್ತಿದ್ದವು. ಈ ಕಾರಣದಿಂದ ನ್ಯಾಯಾಲಯದಿಂದ ನೋಟೀಸ್ ಜಾರಿ, ಪೊಲೀಸ್ ಠಾಣೆಯಲ್ಲಿ ಕೇಸು ಇತ್ಯಾದಿಗಳು ನಡೆದಿತ್ತು. ಹೀಗಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…