Advertisement
ಸುದ್ದಿಗಳು

ಸುಬ್ರಹ್ಮಣ್ಯ: ನೂತನ ಬ್ರಹ್ಮರಥ ಆಗಮನದ ವೇಳೆ ಸುಬ್ರಹ್ಮಣ್ಯ ಶ್ರೀಗಳಿಗೆ ಆಹ್ವಾನದ ಚರ್ಚೆ..!

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥವು ಅ.2 ರಂದು ತಲುಪಲಿದೆ. ಈ ಸಂದರ್ಭ ಸುಬ್ರಹ್ಮಣ್ಯದ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಚರ್ಚೆ ಈಗ ಸಾಮಾಜಿಕ ಜಾಲತಾಣದಲ್ಲಿ ಕಂಡುಬರುತ್ತಿದೆ. ಕಳೆದ ಎರಡು ದಿನಗಳಿಂದ ಈ ಚರ್ಚೆ ನಡೆಯುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಾನಿಗಳಿಂದ ಹಾಗೂ ಭಕ್ತರಿಂದ ನೂತನ ಬ್ರಹ್ಮರಥ ಸಮರ್ಪಣೆಯಾಗಲಿದೆ. ಈಗಾಗಲೇ ಕೋಟೇಶ್ವರದಲ್ಲಿ  ನೂತನ ಬ್ರಹ್ಮರಥ ನಿರ್ಮಾಣಗೊಂಡು ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದ್ದು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಲಿದೆ. ಇದಕ್ಕಾಗಿ ಈಗಾಗಲೇ ಪೂರ್ವಬಾವಿ ಸಭೆಯೂ ನಡೆದಿದೆ. ಅದ್ದೂರಿಯಾಗಿ ಸ್ವಾಗತ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ ಇದೀಗ ಚರ್ಚೆಯಾಗುತ್ತಿರುವುದು  ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಆಹ್ವಾನ ಇದೆಯೋ ಇಲ್ಲವೋ ಎಂಬ ಬಗ್ಗೆ. ಧಾರ್ಮಿಕವಾಗಿ ಸ್ವಾಮೀಜಿಗಳಿಗೆ ಆದ್ಯತೆ ನೀಡಲಾಗುತ್ತದೆಯಾದರೂ ಸುಬ್ರಹ್ಮಣ್ಯದಲ್ಲಿ ಈ ಬಗ್ಗೆ ಯಾವ ನಿರ್ಧಾರಗಳಾಗುತ್ತವೆ ಎಂಬುದು ಚರ್ಚೆಯ ವಿಷಯವಾಗಿದೆ.

ಕಳೆದ ಹಲವಾರು ಸಮಯಗಳಿಂದ ದೇವಸ್ಥಾನದ ಭಕ್ತರು ಹಾಗೂ ಸಂಪುಟ ನರಸಿಂಹ ಮಠದ ನಡುವೆ ಸರ್ಪಸಂಸ್ಕಾರದ ಕಾರಣಕ್ಕಾಗಿ ಚರ್ಚೆ, ವಾದಗಳು ನಡೆಯುತ್ತಿದ್ದವು. ಈ ಕಾರಣದಿಂದ ನ್ಯಾಯಾಲಯದಿಂದ ನೋಟೀಸ್ ಜಾರಿ, ಪೊಲೀಸ್ ಠಾಣೆಯಲ್ಲಿ ಕೇಸು ಇತ್ಯಾದಿಗಳು ನಡೆದಿತ್ತು. ಹೀಗಾಗಿ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago