Advertisement
ಸುದ್ದಿಗಳು

ಸುಬ್ರಹ್ಮಣ್ಯ-ಮಠ ಸಂಧಾನ ಸಭೆ ಸುಬ್ರಹ್ಮಣ್ಯದಲ್ಲೇ ನಡೆಯಲಿ

Share

ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ ಸೇರಿದಂತೆ ಇತರ ಸೇವೆಗಳ ಬಗ್ಗೆ ಸಂಪುಟ ನರಸಿಂಹ ಸ್ವಾಮಿ ಮಠ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಸಮಿತಿ ನಡುವೆ ನಡೆಸುವ ಸಂಧಾನ ಸಭೆ ಸುಬ್ರಹ್ಮಣ್ಯದಲ್ಲೇ ನಡೆಯಬೇಕು ಎಂದು ಆದಿವಾಸಿ ಮಲೆಕುಡಿಯ ಜನಾಂಗದ ಮುಖಂಡ ಎ.ವಿ ನಾಗೇಶ್ ಒತ್ತಾಯ ಮಾಡಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಸಂಪುಟ ನರಸಿಂಹ ಮಠ ಸಮಸ್ತ ನಾಡಿನ ಹಿಂದೂ ಸಮಾಜದ ಧಾರ್ಮಿಕ ಕೇಂದ್ರವಾಗಿದೆ. ಎರಡು ಧಾರ್ಮಿಕ ಸಂಸ್ಥೆಗಳ ಸಮಸ್ಯೆಯನ್ನು ಪರಿಹಾರ ಮಾಡುವವರು ಮತ್ತು ಸಂದಾನ ಕಾರ್ಯ ನಡೆಸುವವರು ಶ್ರೀ ಕ್ಷೇತ್ರದಲ್ಲೇ ನಡೆಸಬೇಕು. ಈ ಬಗ್ಗೆ ಇನ್ಯಾವುದೋ ಸ್ಥಳದಲ್ಲಿ ನಡೆಸುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಗರ್ಭಗುಡಿಯಲ್ಲಿ ಆರಾಧನೆ ಮಾಡುತ್ತಿರುವ ಗಣಪತಿ ದೇವರ ವಿಗ್ರಹವನ್ನು ಮೊದಲು ಇದ್ದಂತಹ ಜಾಗದಲ್ಲೇ ಪ್ರತಿಷ್ಠಾಪಿಸಿ ಆರಾಧಿಸಬೇಕು.  ಶ್ರೀ ಮಠದ ನರಸಿಂಹ  ಗುಡಿಗೆ ಬೇರೆ ಜಾಗದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿದ ನಾಗೇಶ್ ಶ್ರೀ ಶಂಕರಾಚಾರ್ಯರ ಮಹಾ ಸಂಸ್ಥಾನ, ಶೃಂಗೇರಿ ಶಾರದಾಪೀಠದ ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ಸಮ್ಮುಖದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೇ ಸಮಸ್ಯೆಯ ಪರಿಹಾರ ಸಂಧಾನ ಮಾತುಕತೆ ನಡೆಯಬೇಕು.ಸಂಧಾನ ಮಾತುಕತೆಯಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ, ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತ ಮಂಡಳಿ ಮತ್ತು ದೇವಸ್ಥಾನದ ಹಿತರಕ್ಷಣಾ ವೇದಿಕೆ ಸದಸ್ಯರುಗಳನ್ನು ಹೊರತು ಪಡಿಸಿ ಇನ್ನಿತರ ಯಾವುದೇ ಸಂಘ ಸಂಸ್ಥೆಗಳ, ವ್ಯಕ್ತಿಗಳು ಭಾಗಿಯಾಗಬಾರದು. ಅಲ್ಲದೇ ಸಂಧಾನ ಮಾತುಕತೆ ಸಂದರ್ಭದಲ್ಲಿ ಕ್ಷೇತ್ರದ ಮೂಲ ನಿವಾಸಿಗಳಾದ ಮಲೆಕುಡಿಯ ಸಮುದಾಯದ ಅಭಿಪ್ರಾಯಗಳನ್ನು ಕೂಡ ಪರಿಗಣಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದು ನಾಗೇಶ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖರಾದ ಬೆಳ್ಳಿಯಪ್ಪ ಮಲೆಕುಡಿಯ, ಕೇಶವ, ಬಾಬು ಎ.ವಿ, ನಾರಾಯಣ ಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

13 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago