Advertisement
ಸುದ್ದಿಗಳು

ಸುಬ್ರಹ್ಮಣ್ಯ-ಮಠ ಸಂಧಾನ ಸಭೆ ಸುಬ್ರಹ್ಮಣ್ಯದಲ್ಲೇ ನಡೆಯಲಿ

Share

ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ ಸೇರಿದಂತೆ ಇತರ ಸೇವೆಗಳ ಬಗ್ಗೆ ಸಂಪುಟ ನರಸಿಂಹ ಸ್ವಾಮಿ ಮಠ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಸಮಿತಿ ನಡುವೆ ನಡೆಸುವ ಸಂಧಾನ ಸಭೆ ಸುಬ್ರಹ್ಮಣ್ಯದಲ್ಲೇ ನಡೆಯಬೇಕು ಎಂದು ಆದಿವಾಸಿ ಮಲೆಕುಡಿಯ ಜನಾಂಗದ ಮುಖಂಡ ಎ.ವಿ ನಾಗೇಶ್ ಒತ್ತಾಯ ಮಾಡಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಸಂಪುಟ ನರಸಿಂಹ ಮಠ ಸಮಸ್ತ ನಾಡಿನ ಹಿಂದೂ ಸಮಾಜದ ಧಾರ್ಮಿಕ ಕೇಂದ್ರವಾಗಿದೆ. ಎರಡು ಧಾರ್ಮಿಕ ಸಂಸ್ಥೆಗಳ ಸಮಸ್ಯೆಯನ್ನು ಪರಿಹಾರ ಮಾಡುವವರು ಮತ್ತು ಸಂದಾನ ಕಾರ್ಯ ನಡೆಸುವವರು ಶ್ರೀ ಕ್ಷೇತ್ರದಲ್ಲೇ ನಡೆಸಬೇಕು. ಈ ಬಗ್ಗೆ ಇನ್ಯಾವುದೋ ಸ್ಥಳದಲ್ಲಿ ನಡೆಸುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಗರ್ಭಗುಡಿಯಲ್ಲಿ ಆರಾಧನೆ ಮಾಡುತ್ತಿರುವ ಗಣಪತಿ ದೇವರ ವಿಗ್ರಹವನ್ನು ಮೊದಲು ಇದ್ದಂತಹ ಜಾಗದಲ್ಲೇ ಪ್ರತಿಷ್ಠಾಪಿಸಿ ಆರಾಧಿಸಬೇಕು.  ಶ್ರೀ ಮಠದ ನರಸಿಂಹ  ಗುಡಿಗೆ ಬೇರೆ ಜಾಗದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಒತ್ತಾಯಿಸಿದ ನಾಗೇಶ್ ಶ್ರೀ ಶಂಕರಾಚಾರ್ಯರ ಮಹಾ ಸಂಸ್ಥಾನ, ಶೃಂಗೇರಿ ಶಾರದಾಪೀಠದ ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿಗಳ ಸಮ್ಮುಖದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲೇ ಸಮಸ್ಯೆಯ ಪರಿಹಾರ ಸಂಧಾನ ಮಾತುಕತೆ ನಡೆಯಬೇಕು.ಸಂಧಾನ ಮಾತುಕತೆಯಲ್ಲಿ ಶ್ರೀ ದೇವಳದ ಆಡಳಿತ ಮಂಡಳಿ, ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತ ಮಂಡಳಿ ಮತ್ತು ದೇವಸ್ಥಾನದ ಹಿತರಕ್ಷಣಾ ವೇದಿಕೆ ಸದಸ್ಯರುಗಳನ್ನು ಹೊರತು ಪಡಿಸಿ ಇನ್ನಿತರ ಯಾವುದೇ ಸಂಘ ಸಂಸ್ಥೆಗಳ, ವ್ಯಕ್ತಿಗಳು ಭಾಗಿಯಾಗಬಾರದು. ಅಲ್ಲದೇ ಸಂಧಾನ ಮಾತುಕತೆ ಸಂದರ್ಭದಲ್ಲಿ ಕ್ಷೇತ್ರದ ಮೂಲ ನಿವಾಸಿಗಳಾದ ಮಲೆಕುಡಿಯ ಸಮುದಾಯದ ಅಭಿಪ್ರಾಯಗಳನ್ನು ಕೂಡ ಪರಿಗಣಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದು ನಾಗೇಶ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖರಾದ ಬೆಳ್ಳಿಯಪ್ಪ ಮಲೆಕುಡಿಯ, ಕೇಶವ, ಬಾಬು ಎ.ವಿ, ನಾರಾಯಣ ಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

3 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

3 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

4 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

4 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

21 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago