ಸುಬ್ರಹ್ಮಣ್ಯ : ಮೂಲಮೃತ್ತಿಕಾ ಪ್ರಸಾದ ವಿತರಣೆ

November 23, 2019
10:40 PM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರಾಮಹೋತ್ಸವವು ನ.24ರಂದು ಆರಂಭಗೊಂಡು ಡಿ.9ರವರೆಗೆ ನಡೆಯಲಿದೆ. ಆ ಪ್ರಯುಕ್ತ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಇಂದು ಶ್ರೀ ಕ್ಷೇತ್ರದ  ಮಹಾಪ್ರಸಾದ ಮೂಲಮೃತ್ತಿಕೆಯನ್ನು ತೆಗೆಯಲಾಗಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯದ  ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕರು  ವೈದಿಕ ವಿದಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆದು ಬಳಿಕ ಭಕ್ತರಿಗೆ ಪ್ರಸಾದ ಹಂಚಲಾಯಿತು.

Advertisement

ಲಕ್ಷ ದೀಪೋತ್ಸವ ಪೂರ್ವಭಾವಿ ಸಭೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಸಂದರ್ಭ ನಡೆಯಲ್ಪಡುವ ಲಕ್ಷದೀಪೋತ್ಸವ ನ.26 ರಂದು ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಸಾರ್ವಜನಿಕರು, ವರ್ತಕರು ಮತ್ತಿತರ ಪ್ರಮುಖರ ಸಭೆ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೇರಾಲು ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪೇಟೆ, ದೇವಸ್ಥಾನ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಯಾರ ಉಸ್ತುವಾರಿಯಲ್ಲಿ ದೀಪ ಹಚ್ಚುವ ಬಗ್ಗೆ ನಿರ್ಧರಿಸಿ ಸ್ಥಳಗಳನ್ನು ಹಂಚಲಾಯಿತು.

ಈ ಸಂದರ್ಭ ದೇವಳದ ಸಿಬ್ಬಂದಿ ಪದ್ಮನಾಭ ಶೆಟ್ಟಿಗಾರ್ ಹಾಗೂ ಲೋಕೇಶ್ ಉಪಸ್ಥಿತರಿದ್ದರು. ಶಿವರಾಮ ರೈ, ರವಿ ಕಕ್ಕೆಪದವು, ಪ್ರಶಾಂತ್ ಭಟ್ ಮಾಣಿಲ, ಗೋಪಾಲ ಎಣ್ಣೆಮಜಲು, ರವೀಂದ್ರ, ಪ್ರಶಾಂತ್ ಏನೆಕಲ್ಲು, ಮಾದವ ದೇವರಗದ್ದೆ, ಶ್ರೀನಾಥ್ ಭಟ್, ಶೋಭಿತ್ ನೂಚಿಲ, ಜಯರಾಮ ಎಚ್.ಎಲ್, ಜಯರಾಮ ಕಟ್ಟೆಮನೆ, ಗಣೇಶ್, ಎ. ಸವಿತಾ ಭಟ್, ಭಾರತಿ ದಿನೇಶ್, ಕೃಷ್ಣಮೂರ್ತಿ ಭಟ್, ಪ್ರಾಂಶುಪಾಲ ಉದಯಕುಮಾರ್, ಅಚ್ಯುತ ಗೌಡ, ದಿನೇಶ್ ಸಂಪ್ಯಾಡಿ, ಗಣೇಶ್ ನಾಯರ್, ಡಾ.ಪ್ರಸಾದ್, ಜಯಪ್ರಕಾಶ್, ಸೌಮ್ಯ, ರತ್ನಕುಮಾರಿ ಮತ್ತಿತರರು ಉಪಸ್ಥಿತರಿದ್ದು ಸೂಕ್ತ ಸಲಹೆ ನೀಡಿದರು.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ
August 15, 2025
6:54 AM
by: The Rural Mirror ಸುದ್ದಿಜಾಲ
ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ
August 15, 2025
6:43 AM
by: The Rural Mirror ಸುದ್ದಿಜಾಲ
ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |
August 15, 2025
6:34 AM
by: The Rural Mirror ಸುದ್ದಿಜಾಲ
ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ
August 14, 2025
8:55 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group