Advertisement
ಸುದ್ದಿಗಳು

ಸುಬ್ರಹ್ಮಣ್ಯ : ಮೂಲಮೃತ್ತಿಕಾ ಪ್ರಸಾದ ವಿತರಣೆ

Share

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾತ್ರಾಮಹೋತ್ಸವವು ನ.24ರಂದು ಆರಂಭಗೊಂಡು ಡಿ.9ರವರೆಗೆ ನಡೆಯಲಿದೆ. ಆ ಪ್ರಯುಕ್ತ ಕಾರ್ತಿಕ ಬಹುಳ ಏಕಾದಶಿಯ ದಿನವಾದ ಇಂದು ಶ್ರೀ ಕ್ಷೇತ್ರದ  ಮಹಾಪ್ರಸಾದ ಮೂಲಮೃತ್ತಿಕೆಯನ್ನು ತೆಗೆಯಲಾಗಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯದ  ಗರ್ಭಗುಡಿಯಿಂದ ದೇವಳದ ಪ್ರಧಾನ ಅರ್ಚಕರು  ವೈದಿಕ ವಿದಿವಿಧಾನಗಳೊಂದಿಗೆ ಮೂಲಪ್ರಸಾದ ತೆಗೆದು ಬಳಿಕ ಭಕ್ತರಿಗೆ ಪ್ರಸಾದ ಹಂಚಲಾಯಿತು.

ಲಕ್ಷ ದೀಪೋತ್ಸವ ಪೂರ್ವಭಾವಿ ಸಭೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಸಂದರ್ಭ ನಡೆಯಲ್ಪಡುವ ಲಕ್ಷದೀಪೋತ್ಸವ ನ.26 ರಂದು ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಸಾರ್ವಜನಿಕರು, ವರ್ತಕರು ಮತ್ತಿತರ ಪ್ರಮುಖರ ಸಭೆ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ ಪೇರಾಲು ಅವರ ನೇತೃತ್ವದಲ್ಲಿ ನಡೆಯಿತು. ಸಭೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಪೇಟೆ, ದೇವಸ್ಥಾನ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಯಾರ ಉಸ್ತುವಾರಿಯಲ್ಲಿ ದೀಪ ಹಚ್ಚುವ ಬಗ್ಗೆ ನಿರ್ಧರಿಸಿ ಸ್ಥಳಗಳನ್ನು ಹಂಚಲಾಯಿತು.

ಈ ಸಂದರ್ಭ ದೇವಳದ ಸಿಬ್ಬಂದಿ ಪದ್ಮನಾಭ ಶೆಟ್ಟಿಗಾರ್ ಹಾಗೂ ಲೋಕೇಶ್ ಉಪಸ್ಥಿತರಿದ್ದರು. ಶಿವರಾಮ ರೈ, ರವಿ ಕಕ್ಕೆಪದವು, ಪ್ರಶಾಂತ್ ಭಟ್ ಮಾಣಿಲ, ಗೋಪಾಲ ಎಣ್ಣೆಮಜಲು, ರವೀಂದ್ರ, ಪ್ರಶಾಂತ್ ಏನೆಕಲ್ಲು, ಮಾದವ ದೇವರಗದ್ದೆ, ಶ್ರೀನಾಥ್ ಭಟ್, ಶೋಭಿತ್ ನೂಚಿಲ, ಜಯರಾಮ ಎಚ್.ಎಲ್, ಜಯರಾಮ ಕಟ್ಟೆಮನೆ, ಗಣೇಶ್, ಎ. ಸವಿತಾ ಭಟ್, ಭಾರತಿ ದಿನೇಶ್, ಕೃಷ್ಣಮೂರ್ತಿ ಭಟ್, ಪ್ರಾಂಶುಪಾಲ ಉದಯಕುಮಾರ್, ಅಚ್ಯುತ ಗೌಡ, ದಿನೇಶ್ ಸಂಪ್ಯಾಡಿ, ಗಣೇಶ್ ನಾಯರ್, ಡಾ.ಪ್ರಸಾದ್, ಜಯಪ್ರಕಾಶ್, ಸೌಮ್ಯ, ರತ್ನಕುಮಾರಿ ಮತ್ತಿತರರು ಉಪಸ್ಥಿತರಿದ್ದು ಸೂಕ್ತ ಸಲಹೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

12 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

17 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago