ಸುಬ್ರಹ್ಮಣ್ಯ: ಪಂಜದಲ್ಲಿ ಗುರುವಾರ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಸುಬ್ರಹ್ಮಣ್ಯ ಕೆಎಸ್ಸೆಸ್ ಕಾಲೇಜು ದ್ವಿತೀಯ ದರ್ಜೆ ಗುಮಾಸ್ತ ಶೀನಪ್ಪ ರೈ ಅವರ ಅಂತ್ಯಕ್ರಿಯೆ ಶುಕ್ರವಾರ ದೇವರಗದ್ದೆ ನಿವಾಸದಲ್ಲಿ ನಡೆಯಿತು.
ಸುಳ್ಯದಿಂದ ಮೃತರ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಸುಬ್ರಹ್ಮಣ್ಯ ಕೆಎಸ್ಸೆಸ್ ಕಾಲೇಜಿಗೆ ತರಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಸಿಬಂದಿ ವರ್ಗಕ್ಕೆ ಮೃತರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು.
ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಹಾವಿದ್ಯಾಲಯದ ಸಂಚಾಲಕ ನಿತ್ಯಾನಂದ ಮುಂಡೋಡಿ, ವ್ಯವಸ್ಥಾಪನ ಸಮಿತಿ ಸದಸ್ಯರು, ನಿವೃತ್ತ ಪ್ರಾಚಾರ್ಯ ಪ್ರೋ ರಂಗಯ್ಯ ಶೆಟ್ಟಿಗಾರ್, ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ, ಉಪನ್ಯಾಸಕರು, ಭೋಧಕೇತರ ಸಿಬಂದಿಗಳು, ವಿದ್ಯಾರ್ಥಿಗಳು ಸಹಿತ ಅನೇಕ ಮಂದಿ ಗಣ್ಯರು ಹಾಗೂ ಊರವರು ಮೃತರ ಅಂತಿಮ ದರ್ಶನ ಪಡೆದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…