ಸುಬ್ರಹ್ಮಣ್ಯ: ಪಂಜದಲ್ಲಿ ಗುರುವಾರ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಸುಬ್ರಹ್ಮಣ್ಯ ಕೆಎಸ್ಸೆಸ್ ಕಾಲೇಜು ದ್ವಿತೀಯ ದರ್ಜೆ ಗುಮಾಸ್ತ ಶೀನಪ್ಪ ರೈ ಅವರ ಅಂತ್ಯಕ್ರಿಯೆ ಶುಕ್ರವಾರ ದೇವರಗದ್ದೆ ನಿವಾಸದಲ್ಲಿ ನಡೆಯಿತು.
ಸುಳ್ಯದಿಂದ ಮೃತರ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಸುಬ್ರಹ್ಮಣ್ಯ ಕೆಎಸ್ಸೆಸ್ ಕಾಲೇಜಿಗೆ ತರಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಸಿಬಂದಿ ವರ್ಗಕ್ಕೆ ಮೃತರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು.
ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಹಾವಿದ್ಯಾಲಯದ ಸಂಚಾಲಕ ನಿತ್ಯಾನಂದ ಮುಂಡೋಡಿ, ವ್ಯವಸ್ಥಾಪನ ಸಮಿತಿ ಸದಸ್ಯರು, ನಿವೃತ್ತ ಪ್ರಾಚಾರ್ಯ ಪ್ರೋ ರಂಗಯ್ಯ ಶೆಟ್ಟಿಗಾರ್, ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ, ಉಪನ್ಯಾಸಕರು, ಭೋಧಕೇತರ ಸಿಬಂದಿಗಳು, ವಿದ್ಯಾರ್ಥಿಗಳು ಸಹಿತ ಅನೇಕ ಮಂದಿ ಗಣ್ಯರು ಹಾಗೂ ಊರವರು ಮೃತರ ಅಂತಿಮ ದರ್ಶನ ಪಡೆದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…