ಸುಬ್ರಹ್ಮಣ್ಯ: ಪಂಜದಲ್ಲಿ ಗುರುವಾರ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಸುಬ್ರಹ್ಮಣ್ಯ ಕೆಎಸ್ಸೆಸ್ ಕಾಲೇಜು ದ್ವಿತೀಯ ದರ್ಜೆ ಗುಮಾಸ್ತ ಶೀನಪ್ಪ ರೈ ಅವರ ಅಂತ್ಯಕ್ರಿಯೆ ಶುಕ್ರವಾರ ದೇವರಗದ್ದೆ ನಿವಾಸದಲ್ಲಿ ನಡೆಯಿತು.
ಸುಳ್ಯದಿಂದ ಮೃತರ ಪಾರ್ಥಿವ ಶರೀರವನ್ನು ಅಂಬುಲೆನ್ಸ್ ಮೂಲಕ ಸುಬ್ರಹ್ಮಣ್ಯ ಕೆಎಸ್ಸೆಸ್ ಕಾಲೇಜಿಗೆ ತರಲಾಯಿತು. ಬಳಿಕ ವಿದ್ಯಾರ್ಥಿಗಳು ಹಾಗೂ ಸಿಬಂದಿ ವರ್ಗಕ್ಕೆ ಮೃತರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಯಿತು.
ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಹಾವಿದ್ಯಾಲಯದ ಸಂಚಾಲಕ ನಿತ್ಯಾನಂದ ಮುಂಡೋಡಿ, ವ್ಯವಸ್ಥಾಪನ ಸಮಿತಿ ಸದಸ್ಯರು, ನಿವೃತ್ತ ಪ್ರಾಚಾರ್ಯ ಪ್ರೋ ರಂಗಯ್ಯ ಶೆಟ್ಟಿಗಾರ್, ಪ್ರಾಂಶುಪಾಲ ಪ್ರೋ ಉದಯಕುಮಾರ್ ಕೆ, ಉಪನ್ಯಾಸಕರು, ಭೋಧಕೇತರ ಸಿಬಂದಿಗಳು, ವಿದ್ಯಾರ್ಥಿಗಳು ಸಹಿತ ಅನೇಕ ಮಂದಿ ಗಣ್ಯರು ಹಾಗೂ ಊರವರು ಮೃತರ ಅಂತಿಮ ದರ್ಶನ ಪಡೆದರು.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…