ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿ ಪಡೆಯುವವರ ಸೂಕ್ತ ದಾಖಲೆ ಪಡೆದೇ ಕೊಠಡಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಹಿಂದೂ ಸಂಘಟನೆ ಹಾಗೂ ಸ್ಥಳೀಯರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪವಿತ್ರ ಕ್ಷೇತ್ರದಲ್ಲಿ ಯಾವುದೇ ವಸತಿಗೃಹದಲ್ಲಿ ಸರಿಯಾದ ದಾಖಲೆ ಪಡೆಯದೇ ಕೊಠಡಿ ನೀಡುವುದು ಅನೈತಿಕ ವ್ಯವಹಾರಕ್ಕೆ ಅವಕಾಶ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಶ್ರೀ ಕ್ಷೇತ್ರದ ಪಾವಿತ್ರ್ಯತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಊರನಾಗರಿಕರ ಪರವಾಗಿ ಪೋಲಿಸ್ ಇಲಾಖೆಗೆ ಮನವಿಮಾಡಲಾಯಿತು. ಈ ಬಗ್ಗೆ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಅಧಿಕಾರಿಯವರು ಸೇರಿದ ನಾಗರಿಕರಿಗೆ ಭರವಸೆ ನೀಡಿದರು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.