Advertisement
ಜಿಲ್ಲೆ

ಸುಬ್ರಹ್ಮಣ್ಯ ವಿವಾದ : ಸ್ಥಳೀಯ ವಿಹಿಂಪ ಮುಖಂಡರು ಗೈರು ಏಕೆ ?

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸಂದರ್ಭ ಜಿಲ್ಲೆಯಿಂದ ವಿಹಿಂಪ ಮುಖಂಡರು ಹಾಗೂ ಬಜರಂಗದಳ ಮುಖಂಡರು ಆಗಮಿಸಿದರೂ ಸ್ಥಳೀಯ ವಿಹಿಂಪ ಮುಖಂಡರು  ಹಾಗೂ ಸುಳ್ಯ ತಾಲೂಕಿನ ವಿಹಿಂಪ ಮುಖಂಡರೂ ಸಭೆಯಲ್ಲಿ  ಇರಲಿಲ್ಲ.  ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನನದ ಆಡಳಿತವನ್ನೂ ಸಂಘಪರಿವಾರ ವಹಿಸಿಕೊಂಡಿತ್ತು. ಆಗಲೂ ಸರ್ಪಸಂಸ್ಕಾರ ಸೇರಿದಂತೆ ವಿವಿಧ ಚರ್ಚೆಗಳು ನಡೆಯುತ್ತಿತ್ತು. ಇದೀಗ ಹಿಂದೂ ಸಮಾಜದ ಪ್ರಮುಖ ಹಾಗೂ ಪ್ರಭಾವಿ ಸ್ವಾಮೀಜಿಗಳಾದ  ಪೇಜಾವರ ಶ್ರೀಗಳು ಆಗಮಿಸಿದ ಸಂದರ್ಭ ಈ ಹಿಂದಿನ ಆಡಳಿತ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಹೊರತುಪಡಿಸಿ ಉಳಿದ ಯಾರೊಬ್ಬರೂ ಕಂಡುಬಂದಿರಲಿಲ್ಲ. ಈ ಬಗ್ಗೆ ತಾಲೂಕಿನ ವಿಹಿಂಪ ಮುಖಂಡರು ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯ ವಿಹಿಂಪ ಮುಖಂಡರೂ ಸಭೆಯಲ್ಲಿ ಕಾಣಿಸಲಿಲ್ಲ.

ಈ ಹಿಂದೆ ದೇವಸ್ಥಾನದ ಪರವಾಗಿ ಮಾತನಾಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿ ಅವರನ್ನು ಬಿಜೆಪಿಯ  ಹಾಗೂ ಸಂಘಪರಿವಾರದ ಎಲ್ಲಾ ಹುದ್ದೆಯಿಂದ ವಜಾ ಮಾಡಲಾಗಿತ್ತು.  ದೇವಸ್ಥಾನ ಹಾಗೂ ಮಠ ಎರಡೂ ಸಮಾಜ ಎಂದು ಸಂಘ ಪರಿವಾರ ಸೂಚಿಸಿದ ಹಿನ್ನೆಲೆಯಲ್ಲಿ  ಕಿಶೋರ್ ಶಿರಾಡಿ ಅವರ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ ವಿಶ್ವ ಹಿಂದೂ ಪರಿಷದ್ ಸಂಘಪರಿವಾರದ ಧಾರ್ಮಿಕ ಸಂಘಟನೆಯಾಗಿ ಸ್ಥಳೀಯ ಘಟಕಗಳಿಗೆ, ತಾಲೂಕು ಘಟಕಗಳಿಗೆ ಸಹಿತ ಯಾರಿಗೂ ಮಾಹಿತಿ ನೀಡದೆ ಮಠದ ಪರವಾಗಿ ಮಾತನಾಡಿರುವುದು ಸರಿಯೇ  ಕಿಶೋರ್ ಶಿರಾಡಿ ಅಭಿಮಾನಿ ಬಳಗ ಅಸಮಾಧಾನ ವ್ಯಕ್ತಪಡಿಸುತ್ತದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago