Advertisement
ಜಿಲ್ಲೆ

ಸುಬ್ರಹ್ಮಣ್ಯ ವಿವಾದ : ಸ್ಥಳೀಯ ವಿಹಿಂಪ ಮುಖಂಡರು ಗೈರು ಏಕೆ ?

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸಂದರ್ಭ ಜಿಲ್ಲೆಯಿಂದ ವಿಹಿಂಪ ಮುಖಂಡರು ಹಾಗೂ ಬಜರಂಗದಳ ಮುಖಂಡರು ಆಗಮಿಸಿದರೂ ಸ್ಥಳೀಯ ವಿಹಿಂಪ ಮುಖಂಡರು  ಹಾಗೂ ಸುಳ್ಯ ತಾಲೂಕಿನ ವಿಹಿಂಪ ಮುಖಂಡರೂ ಸಭೆಯಲ್ಲಿ  ಇರಲಿಲ್ಲ.  ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನನದ ಆಡಳಿತವನ್ನೂ ಸಂಘಪರಿವಾರ ವಹಿಸಿಕೊಂಡಿತ್ತು. ಆಗಲೂ ಸರ್ಪಸಂಸ್ಕಾರ ಸೇರಿದಂತೆ ವಿವಿಧ ಚರ್ಚೆಗಳು ನಡೆಯುತ್ತಿತ್ತು. ಇದೀಗ ಹಿಂದೂ ಸಮಾಜದ ಪ್ರಮುಖ ಹಾಗೂ ಪ್ರಭಾವಿ ಸ್ವಾಮೀಜಿಗಳಾದ  ಪೇಜಾವರ ಶ್ರೀಗಳು ಆಗಮಿಸಿದ ಸಂದರ್ಭ ಈ ಹಿಂದಿನ ಆಡಳಿತ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಹೊರತುಪಡಿಸಿ ಉಳಿದ ಯಾರೊಬ್ಬರೂ ಕಂಡುಬಂದಿರಲಿಲ್ಲ. ಈ ಬಗ್ಗೆ ತಾಲೂಕಿನ ವಿಹಿಂಪ ಮುಖಂಡರು ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯ ವಿಹಿಂಪ ಮುಖಂಡರೂ ಸಭೆಯಲ್ಲಿ ಕಾಣಿಸಲಿಲ್ಲ.

ಈ ಹಿಂದೆ ದೇವಸ್ಥಾನದ ಪರವಾಗಿ ಮಾತನಾಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿ ಅವರನ್ನು ಬಿಜೆಪಿಯ  ಹಾಗೂ ಸಂಘಪರಿವಾರದ ಎಲ್ಲಾ ಹುದ್ದೆಯಿಂದ ವಜಾ ಮಾಡಲಾಗಿತ್ತು.  ದೇವಸ್ಥಾನ ಹಾಗೂ ಮಠ ಎರಡೂ ಸಮಾಜ ಎಂದು ಸಂಘ ಪರಿವಾರ ಸೂಚಿಸಿದ ಹಿನ್ನೆಲೆಯಲ್ಲಿ  ಕಿಶೋರ್ ಶಿರಾಡಿ ಅವರ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ ವಿಶ್ವ ಹಿಂದೂ ಪರಿಷದ್ ಸಂಘಪರಿವಾರದ ಧಾರ್ಮಿಕ ಸಂಘಟನೆಯಾಗಿ ಸ್ಥಳೀಯ ಘಟಕಗಳಿಗೆ, ತಾಲೂಕು ಘಟಕಗಳಿಗೆ ಸಹಿತ ಯಾರಿಗೂ ಮಾಹಿತಿ ನೀಡದೆ ಮಠದ ಪರವಾಗಿ ಮಾತನಾಡಿರುವುದು ಸರಿಯೇ  ಕಿಶೋರ್ ಶಿರಾಡಿ ಅಭಿಮಾನಿ ಬಳಗ ಅಸಮಾಧಾನ ವ್ಯಕ್ತಪಡಿಸುತ್ತದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

9 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

10 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

23 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

24 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago