Advertisement
ಜಿಲ್ಲೆ

ಸುಬ್ರಹ್ಮಣ್ಯ ವಿವಾದ : ಸ್ಥಳೀಯ ವಿಹಿಂಪ ಮುಖಂಡರು ಗೈರು ಏಕೆ ?

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸಂದರ್ಭ ಜಿಲ್ಲೆಯಿಂದ ವಿಹಿಂಪ ಮುಖಂಡರು ಹಾಗೂ ಬಜರಂಗದಳ ಮುಖಂಡರು ಆಗಮಿಸಿದರೂ ಸ್ಥಳೀಯ ವಿಹಿಂಪ ಮುಖಂಡರು  ಹಾಗೂ ಸುಳ್ಯ ತಾಲೂಕಿನ ವಿಹಿಂಪ ಮುಖಂಡರೂ ಸಭೆಯಲ್ಲಿ  ಇರಲಿಲ್ಲ.  ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನನದ ಆಡಳಿತವನ್ನೂ ಸಂಘಪರಿವಾರ ವಹಿಸಿಕೊಂಡಿತ್ತು. ಆಗಲೂ ಸರ್ಪಸಂಸ್ಕಾರ ಸೇರಿದಂತೆ ವಿವಿಧ ಚರ್ಚೆಗಳು ನಡೆಯುತ್ತಿತ್ತು. ಇದೀಗ ಹಿಂದೂ ಸಮಾಜದ ಪ್ರಮುಖ ಹಾಗೂ ಪ್ರಭಾವಿ ಸ್ವಾಮೀಜಿಗಳಾದ  ಪೇಜಾವರ ಶ್ರೀಗಳು ಆಗಮಿಸಿದ ಸಂದರ್ಭ ಈ ಹಿಂದಿನ ಆಡಳಿತ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಹೊರತುಪಡಿಸಿ ಉಳಿದ ಯಾರೊಬ್ಬರೂ ಕಂಡುಬಂದಿರಲಿಲ್ಲ. ಈ ಬಗ್ಗೆ ತಾಲೂಕಿನ ವಿಹಿಂಪ ಮುಖಂಡರು ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯ ವಿಹಿಂಪ ಮುಖಂಡರೂ ಸಭೆಯಲ್ಲಿ ಕಾಣಿಸಲಿಲ್ಲ.

ಈ ಹಿಂದೆ ದೇವಸ್ಥಾನದ ಪರವಾಗಿ ಮಾತನಾಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿ ಅವರನ್ನು ಬಿಜೆಪಿಯ  ಹಾಗೂ ಸಂಘಪರಿವಾರದ ಎಲ್ಲಾ ಹುದ್ದೆಯಿಂದ ವಜಾ ಮಾಡಲಾಗಿತ್ತು.  ದೇವಸ್ಥಾನ ಹಾಗೂ ಮಠ ಎರಡೂ ಸಮಾಜ ಎಂದು ಸಂಘ ಪರಿವಾರ ಸೂಚಿಸಿದ ಹಿನ್ನೆಲೆಯಲ್ಲಿ  ಕಿಶೋರ್ ಶಿರಾಡಿ ಅವರ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ ವಿಶ್ವ ಹಿಂದೂ ಪರಿಷದ್ ಸಂಘಪರಿವಾರದ ಧಾರ್ಮಿಕ ಸಂಘಟನೆಯಾಗಿ ಸ್ಥಳೀಯ ಘಟಕಗಳಿಗೆ, ತಾಲೂಕು ಘಟಕಗಳಿಗೆ ಸಹಿತ ಯಾರಿಗೂ ಮಾಹಿತಿ ನೀಡದೆ ಮಠದ ಪರವಾಗಿ ಮಾತನಾಡಿರುವುದು ಸರಿಯೇ  ಕಿಶೋರ್ ಶಿರಾಡಿ ಅಭಿಮಾನಿ ಬಳಗ ಅಸಮಾಧಾನ ವ್ಯಕ್ತಪಡಿಸುತ್ತದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago