Advertisement
ಜಿಲ್ಲೆ

ಸುಬ್ರಹ್ಮಣ್ಯ ವಿವಾದ : ಸ್ಥಳೀಯ ವಿಹಿಂಪ ಮುಖಂಡರು ಗೈರು ಏಕೆ ?

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸಂದರ್ಭ ಜಿಲ್ಲೆಯಿಂದ ವಿಹಿಂಪ ಮುಖಂಡರು ಹಾಗೂ ಬಜರಂಗದಳ ಮುಖಂಡರು ಆಗಮಿಸಿದರೂ ಸ್ಥಳೀಯ ವಿಹಿಂಪ ಮುಖಂಡರು  ಹಾಗೂ ಸುಳ್ಯ ತಾಲೂಕಿನ ವಿಹಿಂಪ ಮುಖಂಡರೂ ಸಭೆಯಲ್ಲಿ  ಇರಲಿಲ್ಲ.  ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನನದ ಆಡಳಿತವನ್ನೂ ಸಂಘಪರಿವಾರ ವಹಿಸಿಕೊಂಡಿತ್ತು. ಆಗಲೂ ಸರ್ಪಸಂಸ್ಕಾರ ಸೇರಿದಂತೆ ವಿವಿಧ ಚರ್ಚೆಗಳು ನಡೆಯುತ್ತಿತ್ತು. ಇದೀಗ ಹಿಂದೂ ಸಮಾಜದ ಪ್ರಮುಖ ಹಾಗೂ ಪ್ರಭಾವಿ ಸ್ವಾಮೀಜಿಗಳಾದ  ಪೇಜಾವರ ಶ್ರೀಗಳು ಆಗಮಿಸಿದ ಸಂದರ್ಭ ಈ ಹಿಂದಿನ ಆಡಳಿತ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಹೊರತುಪಡಿಸಿ ಉಳಿದ ಯಾರೊಬ್ಬರೂ ಕಂಡುಬಂದಿರಲಿಲ್ಲ. ಈ ಬಗ್ಗೆ ತಾಲೂಕಿನ ವಿಹಿಂಪ ಮುಖಂಡರು ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯ ವಿಹಿಂಪ ಮುಖಂಡರೂ ಸಭೆಯಲ್ಲಿ ಕಾಣಿಸಲಿಲ್ಲ.

ಈ ಹಿಂದೆ ದೇವಸ್ಥಾನದ ಪರವಾಗಿ ಮಾತನಾಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿ ಅವರನ್ನು ಬಿಜೆಪಿಯ  ಹಾಗೂ ಸಂಘಪರಿವಾರದ ಎಲ್ಲಾ ಹುದ್ದೆಯಿಂದ ವಜಾ ಮಾಡಲಾಗಿತ್ತು.  ದೇವಸ್ಥಾನ ಹಾಗೂ ಮಠ ಎರಡೂ ಸಮಾಜ ಎಂದು ಸಂಘ ಪರಿವಾರ ಸೂಚಿಸಿದ ಹಿನ್ನೆಲೆಯಲ್ಲಿ  ಕಿಶೋರ್ ಶಿರಾಡಿ ಅವರ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ ವಿಶ್ವ ಹಿಂದೂ ಪರಿಷದ್ ಸಂಘಪರಿವಾರದ ಧಾರ್ಮಿಕ ಸಂಘಟನೆಯಾಗಿ ಸ್ಥಳೀಯ ಘಟಕಗಳಿಗೆ, ತಾಲೂಕು ಘಟಕಗಳಿಗೆ ಸಹಿತ ಯಾರಿಗೂ ಮಾಹಿತಿ ನೀಡದೆ ಮಠದ ಪರವಾಗಿ ಮಾತನಾಡಿರುವುದು ಸರಿಯೇ  ಕಿಶೋರ್ ಶಿರಾಡಿ ಅಭಿಮಾನಿ ಬಳಗ ಅಸಮಾಧಾನ ವ್ಯಕ್ತಪಡಿಸುತ್ತದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

7 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

16 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

16 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

16 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago