Advertisement
ಜಿಲ್ಲೆ

ಸುಬ್ರಹ್ಮಣ್ಯ ವಿವಾದ : ಸ್ಥಳೀಯ ವಿಹಿಂಪ ಮುಖಂಡರು ಗೈರು ಏಕೆ ?

Share

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವಿನ ವಿವಾದ ಬಗೆಹರಿಸಲು ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಸಂದರ್ಭ ಜಿಲ್ಲೆಯಿಂದ ವಿಹಿಂಪ ಮುಖಂಡರು ಹಾಗೂ ಬಜರಂಗದಳ ಮುಖಂಡರು ಆಗಮಿಸಿದರೂ ಸ್ಥಳೀಯ ವಿಹಿಂಪ ಮುಖಂಡರು  ಹಾಗೂ ಸುಳ್ಯ ತಾಲೂಕಿನ ವಿಹಿಂಪ ಮುಖಂಡರೂ ಸಭೆಯಲ್ಲಿ  ಇರಲಿಲ್ಲ.  ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನನದ ಆಡಳಿತವನ್ನೂ ಸಂಘಪರಿವಾರ ವಹಿಸಿಕೊಂಡಿತ್ತು. ಆಗಲೂ ಸರ್ಪಸಂಸ್ಕಾರ ಸೇರಿದಂತೆ ವಿವಿಧ ಚರ್ಚೆಗಳು ನಡೆಯುತ್ತಿತ್ತು. ಇದೀಗ ಹಿಂದೂ ಸಮಾಜದ ಪ್ರಮುಖ ಹಾಗೂ ಪ್ರಭಾವಿ ಸ್ವಾಮೀಜಿಗಳಾದ  ಪೇಜಾವರ ಶ್ರೀಗಳು ಆಗಮಿಸಿದ ಸಂದರ್ಭ ಈ ಹಿಂದಿನ ಆಡಳಿತ ಸಮಿತಿ ಸದಸ್ಯ ಕಿಶೋರ್ ಶಿರಾಡಿ ಹೊರತುಪಡಿಸಿ ಉಳಿದ ಯಾರೊಬ್ಬರೂ ಕಂಡುಬಂದಿರಲಿಲ್ಲ. ಈ ಬಗ್ಗೆ ತಾಲೂಕಿನ ವಿಹಿಂಪ ಮುಖಂಡರು ಈ ಬಗ್ಗೆ ನಮಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಳೀಯ ವಿಹಿಂಪ ಮುಖಂಡರೂ ಸಭೆಯಲ್ಲಿ ಕಾಣಿಸಲಿಲ್ಲ.

ಈ ಹಿಂದೆ ದೇವಸ್ಥಾನದ ಪರವಾಗಿ ಮಾತನಾಡಿದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕಿಶೋರ್ ಶಿರಾಡಿ ಅವರನ್ನು ಬಿಜೆಪಿಯ  ಹಾಗೂ ಸಂಘಪರಿವಾರದ ಎಲ್ಲಾ ಹುದ್ದೆಯಿಂದ ವಜಾ ಮಾಡಲಾಗಿತ್ತು.  ದೇವಸ್ಥಾನ ಹಾಗೂ ಮಠ ಎರಡೂ ಸಮಾಜ ಎಂದು ಸಂಘ ಪರಿವಾರ ಸೂಚಿಸಿದ ಹಿನ್ನೆಲೆಯಲ್ಲಿ  ಕಿಶೋರ್ ಶಿರಾಡಿ ಅವರ ಹುದ್ದೆಯಿಂದ ವಜಾ ಮಾಡಲಾಗಿತ್ತು. ಆದರೆ ವಿಶ್ವ ಹಿಂದೂ ಪರಿಷದ್ ಸಂಘಪರಿವಾರದ ಧಾರ್ಮಿಕ ಸಂಘಟನೆಯಾಗಿ ಸ್ಥಳೀಯ ಘಟಕಗಳಿಗೆ, ತಾಲೂಕು ಘಟಕಗಳಿಗೆ ಸಹಿತ ಯಾರಿಗೂ ಮಾಹಿತಿ ನೀಡದೆ ಮಠದ ಪರವಾಗಿ ಮಾತನಾಡಿರುವುದು ಸರಿಯೇ  ಕಿಶೋರ್ ಶಿರಾಡಿ ಅಭಿಮಾನಿ ಬಳಗ ಅಸಮಾಧಾನ ವ್ಯಕ್ತಪಡಿಸುತ್ತದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

7 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

15 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

16 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

16 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

22 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 day ago