ಸುಬ್ರಹ್ಮಣ್ಯ: ಸಂಪುಟ ಶ್ರೀನರಸಿಂಹ ಸ್ವಾಮಿ ಮಠದಲ್ಲಿ ಶ್ರೀಗಳ 23 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಅನಿರುದ್ಧ ವೇದಿಕೆಯಲ್ಲಿ ಆರಂಭಗೊಂಡ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟನೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತಿರ್ಥ ಶ್ರೀಗಳು, ಕಲಿಯುಗದಲ್ಲಿ ಶ್ರೀಕೃಷ್ಣನ ಆರಾಧನೆ ಮಾಡಿದಲ್ಲಿ ಬೇಗ ಅನುಗ್ರಹ ಪ್ರಾಪ್ತಿಯಾಗುತ್ತದೆ. ಶ್ರೀ ಕೃಷ್ಣನ ಉಪಾಸನೆಗೆ ಅನಂತ ಅನುಗ್ರಹವಿದೆ ಎಂದು ಹೇಳಿದರು.
ಚಾತುರ್ಮಾಸವು ಧಾರ್ಮಿಕ ಆಧ್ಯಾತ್ಮಿಕ ಮಹತ್ವದ ಆಚರಣೆಯೆ ಆಗಿದೆ. ಮಹತ್ವ ಅರಿತು ಸನ್ಮಾರ್ಗದಲ್ಲಿ ನಡೆಯಲು ಸರ್ವಶಕ್ತನಾದ ಭಗವಂತನ ಅನುಗ್ರಹ ಪ್ರಾಪ್ತಿಗಾಗಿ ಈ ವ್ರತವನ್ನು ಆಚರಿಸಲಾಗುತ್ತದೆ ಎಂದರು.
ಆರಂಭದಲ್ಲಿ ಸ್ಥಳೀಯ ಕಲಾವಿದರಿಂದ ವಾದ್ಯ ಸಂಗೀತ ಹಾಗೂ ಮಂಗಳ ವಾದ್ಯ ನಡೆಯಿತು. ಬಳಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕೃಷ್ಣಗಾನಾಮೃತವು ಸ್ಥಳೀಯ ಕಲಾವಿದರುಗಳಿಂದ ನೆರವೇರಿತು. ಕಲಾವಿದ ಯಜ್ಞೇಶ್ ಆಚಾರ್, ರವೀಂದ್ರ ನೂಚಿಲ ಕಾರ್ಯಕ್ರಮ ನಿರ್ವಹಿಸಿದರು.
ಆ.24ರಂದು ಯತಿಗಳಿಂದ ಪ್ರವಚನ ನಡೆಯಿತು. ಸಂಜೆ 5.30 ರಿಂದ ಧಾರ್ಮಿಕ ಆಚರಣೆಗಳಲ್ಲಿ ಸುಧಾರಣೆ ಅನಿವಾರ್ಯವೇ? ಎಂಬ ಕುರಿತು ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು. ಚಿಂತನ ಮಂಥನದ ಸಮನ್ವಯಕಾರರಾಗಿ ಪುತ್ತೂರು ವಿವೇಕಾನಂದ ಕಾಲೇಜಇನ ಉಪನ್ಯಾಸಕ ಡಾ.ಶ್ರೀಶ ಕುಮಾರ್ ಭಾಗವಹಿಸಿದ್ದರು. ಸಂವಾದಕರಾಗಿ ರಾಜ್ಯ ಸಂಪನ್ಮೂಲ ವ್ಯಕ್ತಿ, ಪ್ರಕಾಶ್ ಮೂಡಿತ್ತಾಯ, ಉಪನ್ಯಾಸಕ ರಾಕೇಶ್ ಕುಮಾರ್ ಕಮ್ಮಾಜೆ, ವೆಂಕಟ್ರಾಂ ಭಟ್ ಭಾಗವಹಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…