Advertisement
ಧಾರ್ಮಿಕ

ಸುಬ್ರಹ್ಮಣ್ಯ: ಶ್ರೀಸಂಪುಟ ನರಸಿಂಹ ಮಠದಲ್ಲಿ ಸಾಂಸ್ಕೃತಿಕ ವೈಭವಕ್ಕೆ ಚಾಲನೆ

Share

ಸುಬ್ರಹ್ಮಣ್ಯ: ಸಂಪುಟ ಶ್ರೀನರಸಿಂಹ ಸ್ವಾಮಿ ಮಠದಲ್ಲಿ ಶ್ರೀಗಳ 23 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ  ಅನಿರುದ್ಧ ವೇದಿಕೆಯಲ್ಲಿ ಆರಂಭಗೊಂಡ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟನೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತಿರ್ಥ ಶ್ರೀಗಳು, ಕಲಿಯುಗದಲ್ಲಿ ಶ್ರೀಕೃಷ್ಣನ ಆರಾಧನೆ ಮಾಡಿದಲ್ಲಿ ಬೇಗ ಅನುಗ್ರಹ ಪ್ರಾಪ್ತಿಯಾಗುತ್ತದೆ. ಶ್ರೀ ಕೃಷ್ಣನ ಉಪಾಸನೆಗೆ ಅನಂತ ಅನುಗ್ರಹವಿದೆ ಎಂದು ಹೇಳಿದರು.

ಚಾತುರ್ಮಾಸವು ಧಾರ್ಮಿಕ ಆಧ್ಯಾತ್ಮಿಕ ಮಹತ್ವದ ಆಚರಣೆಯೆ ಆಗಿದೆ. ಮಹತ್ವ ಅರಿತು ಸನ್ಮಾರ್ಗದಲ್ಲಿ ನಡೆಯಲು ಸರ್ವಶಕ್ತನಾದ ಭಗವಂತನ ಅನುಗ್ರಹ ಪ್ರಾಪ್ತಿಗಾಗಿ ಈ ವ್ರತವನ್ನು ಆಚರಿಸಲಾಗುತ್ತದೆ ಎಂದರು.
ಆರಂಭದಲ್ಲಿ ಸ್ಥಳೀಯ ಕಲಾವಿದರಿಂದ ವಾದ್ಯ ಸಂಗೀತ ಹಾಗೂ ಮಂಗಳ ವಾದ್ಯ ನಡೆಯಿತು. ಬಳಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕೃಷ್ಣಗಾನಾಮೃತವು ಸ್ಥಳೀಯ ಕಲಾವಿದರುಗಳಿಂದ ನೆರವೇರಿತು. ಕಲಾವಿದ ಯಜ್ಞೇಶ್ ಆಚಾರ್, ರವೀಂದ್ರ ನೂಚಿಲ ಕಾರ್ಯಕ್ರಮ ನಿರ್ವಹಿಸಿದರು.

ಆ.24ರಂದು ಯತಿಗಳಿಂದ ಪ್ರವಚನ ನಡೆಯಿತು. ಸಂಜೆ 5.30 ರಿಂದ ಧಾರ್ಮಿಕ ಆಚರಣೆಗಳಲ್ಲಿ ಸುಧಾರಣೆ ಅನಿವಾರ್ಯವೇ? ಎಂಬ ಕುರಿತು  ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು. ಚಿಂತನ ಮಂಥನದ ಸಮನ್ವಯಕಾರರಾಗಿ ಪುತ್ತೂರು ವಿವೇಕಾನಂದ ಕಾಲೇಜಇನ ಉಪನ್ಯಾಸಕ ಡಾ.ಶ್ರೀಶ ಕುಮಾರ್ ಭಾಗವಹಿಸಿದ್ದರು. ಸಂವಾದಕರಾಗಿ ರಾಜ್ಯ ಸಂಪನ್ಮೂಲ ವ್ಯಕ್ತಿ, ಪ್ರಕಾಶ್ ಮೂಡಿತ್ತಾಯ, ಉಪನ್ಯಾಸಕ ರಾಕೇಶ್ ಕುಮಾರ್ ಕಮ್ಮಾಜೆ, ವೆಂಕಟ್ರಾಂ ಭಟ್ ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

9 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

9 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

13 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago