ಸುಬ್ರಹ್ಮಣ್ಯ: ಸಂಪುಟ ಶ್ರೀನರಸಿಂಹ ಸ್ವಾಮಿ ಮಠದಲ್ಲಿ ಶ್ರೀಗಳ 23 ನೇ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ಅನಿರುದ್ಧ ವೇದಿಕೆಯಲ್ಲಿ ಆರಂಭಗೊಂಡ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟನೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತಿರ್ಥ ಶ್ರೀಗಳು, ಕಲಿಯುಗದಲ್ಲಿ ಶ್ರೀಕೃಷ್ಣನ ಆರಾಧನೆ ಮಾಡಿದಲ್ಲಿ ಬೇಗ ಅನುಗ್ರಹ ಪ್ರಾಪ್ತಿಯಾಗುತ್ತದೆ. ಶ್ರೀ ಕೃಷ್ಣನ ಉಪಾಸನೆಗೆ ಅನಂತ ಅನುಗ್ರಹವಿದೆ ಎಂದು ಹೇಳಿದರು.
ಚಾತುರ್ಮಾಸವು ಧಾರ್ಮಿಕ ಆಧ್ಯಾತ್ಮಿಕ ಮಹತ್ವದ ಆಚರಣೆಯೆ ಆಗಿದೆ. ಮಹತ್ವ ಅರಿತು ಸನ್ಮಾರ್ಗದಲ್ಲಿ ನಡೆಯಲು ಸರ್ವಶಕ್ತನಾದ ಭಗವಂತನ ಅನುಗ್ರಹ ಪ್ರಾಪ್ತಿಗಾಗಿ ಈ ವ್ರತವನ್ನು ಆಚರಿಸಲಾಗುತ್ತದೆ ಎಂದರು.
ಆರಂಭದಲ್ಲಿ ಸ್ಥಳೀಯ ಕಲಾವಿದರಿಂದ ವಾದ್ಯ ಸಂಗೀತ ಹಾಗೂ ಮಂಗಳ ವಾದ್ಯ ನಡೆಯಿತು. ಬಳಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕೃಷ್ಣಗಾನಾಮೃತವು ಸ್ಥಳೀಯ ಕಲಾವಿದರುಗಳಿಂದ ನೆರವೇರಿತು. ಕಲಾವಿದ ಯಜ್ಞೇಶ್ ಆಚಾರ್, ರವೀಂದ್ರ ನೂಚಿಲ ಕಾರ್ಯಕ್ರಮ ನಿರ್ವಹಿಸಿದರು.
ಆ.24ರಂದು ಯತಿಗಳಿಂದ ಪ್ರವಚನ ನಡೆಯಿತು. ಸಂಜೆ 5.30 ರಿಂದ ಧಾರ್ಮಿಕ ಆಚರಣೆಗಳಲ್ಲಿ ಸುಧಾರಣೆ ಅನಿವಾರ್ಯವೇ? ಎಂಬ ಕುರಿತು ಚಿಂತನ-ಮಂಥನ ಕಾರ್ಯಕ್ರಮ ನಡೆಯಿತು. ಚಿಂತನ ಮಂಥನದ ಸಮನ್ವಯಕಾರರಾಗಿ ಪುತ್ತೂರು ವಿವೇಕಾನಂದ ಕಾಲೇಜಇನ ಉಪನ್ಯಾಸಕ ಡಾ.ಶ್ರೀಶ ಕುಮಾರ್ ಭಾಗವಹಿಸಿದ್ದರು. ಸಂವಾದಕರಾಗಿ ರಾಜ್ಯ ಸಂಪನ್ಮೂಲ ವ್ಯಕ್ತಿ, ಪ್ರಕಾಶ್ ಮೂಡಿತ್ತಾಯ, ಉಪನ್ಯಾಸಕ ರಾಕೇಶ್ ಕುಮಾರ್ ಕಮ್ಮಾಜೆ, ವೆಂಕಟ್ರಾಂ ಭಟ್ ಭಾಗವಹಿಸಿದ್ದರು.
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…