ಸುಬ್ರಹ್ಮಣ್ಯ : ಆಷಾಢ ಶುದ್ಧ ಏಕಾದಶಿ ದಿನ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮ ನಡೆಯಿತು. ಮಠಾಧೀಶರಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ತಪ್ತ ಮುದ್ರಾಧಾರಣೆ ನೆರವೇರಿಸಿದರು.
ಪ್ರತಿ ವರ್ಷವೂ ಶನೈಕಾದಶಿ ಆಷಾಢ ಶುಕ್ಲ ದಿನ ತಪ್ತ ಮುದ್ರಾಧಾರಣೆಯನ್ನು ಮಠಾಧೀಶರು ನಡೆಸಿಕೊಂಡು ಬರುತ್ತಾರೆ. ಗಣಪತಿ ಹೋಮದ ಬೆಂಕಿಯಲ್ಲಿ ಮುದ್ರೆಗಳನ್ನು ಕಾಯಿಸಿ ದೇಹದ ಮೇಲೆ ಮುದ್ರೆಗಳನ್ನು ಒತ್ತಲಾಗುತ್ತದೆ. ಶ್ರೀಗಳು ತಮ್ಮ ಶಿಷ್ಯರಿಗೆ ಭಕ್ತರಿಗೆ ತಪ್ತ ಮುದ್ರಾಧಾರಣೆ ಹಾಕಿದರು. ಬಲಭುಜ, ಎಡ ಭಾಗದಲ್ಲಿ ಶಂಖವನ್ನು ಹೊಟ್ಟೆಯ ಮೇಲೆ ಒಂದು ಚಕ್ರವನ್ನು ಮುದ್ರಿಸಲಾಗುತ್ತದೆ, ಲೋಹ ಮುದ್ರೆಗಳನ್ನು ಹಾಕಿಸಿಕೊಳ್ಳುವ ಮೂಲಕ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಅಪಾರ ಭಕ್ತರು ಮುದ್ರಾಧಾರಣೆಯನ್ನು ಹಾಕಿಸಿಕೊಳ್ಳುತ್ತಾರೆ. ಈ ತಪ್ತ ಮುದ್ರಾಧಾರಣೆಯನ್ನು ದೇವಸ್ಥಾನಗಳಲ್ಲಿ ನಡೆಸಲಾಗುತ್ತದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…