ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಮಠದ ಗೋಶಾಲೆಯಲ್ಲಿ ಕರುವಿಗೆ ಆಶ್ರಯ

August 30, 2019
2:15 PM

ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಸಮೀಪದ ಮಲೆಯಾಳ ಬಳಿ  ಕಾಲಿಗೆ ಗಾಯಗೊಂಡು ಅನಾಥವಾಗಿ ಕಂಡು ಬಂದ ಹೋರಿ ಕರುವನ್ನು ರಕ್ಷಿಸಿದ ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜಿನ ಎಬಿವಿಪಿ ವಿದ್ಯಾರ್ಥಿಗಳು ಕರುವನ್ನು ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಗೋಶಾಲೆಗೆ ಸೇರಿಸಿದ್ದಾರೆ.

Advertisement
Advertisement

ಕೆಲ ದಿನಗಳ ಹಿಂದೆ ಯಾರೋ ಕಿಡಿಗೇಡಿಗಳು ರಾತ್ರಿ ಹೊತ್ತು ಹೋರಿ ಕರುವೊಂದನ್ನು ಸುಬ್ರಹ್ಮಣ್ಯ –ಜಾಲ್ಸೂರು ಸಂಪರ್ಕ ರಸ್ತೆಯ ಮಲೆಯಾಳ ಬಳಿ ತಂದು ಬಿಟ್ಟು ಹೋಗಿದ್ದರು. ಅಂದಿನಿಂದ ಸ್ಥಳಿಯವಾಗಿ ಕರುವುದು ತಿರುಗಾಡಿಕೊಂಡಿತ್ತು. ಬುಧವಾರ ಕಾಲಿಗೆ ಏಟು ಮಾಡಿಕೊಂಡ ಸ್ಥಿತಿಯಲ್ಲಿ ಕರು ರಸ್ತೆ ಬದಿ ಇರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ  ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ಅವರ ಗಮನಕ್ಕೆ ತಂದಿದ್ದರು.

ಕರುವಿಗೆ ಮಠದ ಗೋಶಾಲೆಯಲ್ಲಿ ಆಶ್ರಯ ಒದಗಿಸುವ ಕುರಿತು ಅವರಿಂದ ಭರವಸೆ ವ್ಯಕ್ತಗೊಂಡಿತ್ತು. ಜತೆಗೆ ಮಠದಿಂದ ವಾಹನವನ್ನು ಸಿಬಂದಿಗಳನ್ನು ಮಕ್ಕಳ ಜತೆ ಕಳಿಸಿಕೊಟ್ಟು ವ್ಯವಸ್ಥೆ ಕಲ್ಪಿಸಿದ್ದರು. ಅದರಂತೆ ಸಿಬಂದಿಗಳ ನೆರವಿನಿಂದ ವಿದ್ಯಾರ್ಥಿಗಳು ಕರುವನ್ನು ಹಿಡಿದು ತಂದು ಮಠಕ್ಕೆ ಒಪ್ಪಿಸಿದ್ದು ಮಠದಲ್ಲಿ ಕರುವಿಗೆ ಚಿಕಿತ್ಸೆ ನೀಡಿ ಆಶ್ರಯ ನೀಡಲಾಗಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ
June 2, 2025
7:16 AM
by: ದ ರೂರಲ್ ಮಿರರ್.ಕಾಂ
ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….
June 1, 2025
6:33 AM
by: ದ ರೂರಲ್ ಮಿರರ್.ಕಾಂ
ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ
May 31, 2025
9:45 PM
by: The Rural Mirror ಸುದ್ದಿಜಾಲ
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ
May 31, 2025
9:31 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group