ಸುಬ್ರಹ್ಮಣ್ಯ :ಸುಬ್ರಹ್ಮಣ್ಯ ಸಮೀಪದ ಮಲೆಯಾಳ ಬಳಿ ಕಾಲಿಗೆ ಗಾಯಗೊಂಡು ಅನಾಥವಾಗಿ ಕಂಡು ಬಂದ ಹೋರಿ ಕರುವನ್ನು ರಕ್ಷಿಸಿದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನ ಎಬಿವಿಪಿ ವಿದ್ಯಾರ್ಥಿಗಳು ಕರುವನ್ನು ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಗೋಶಾಲೆಗೆ ಸೇರಿಸಿದ್ದಾರೆ.
ಕೆಲ ದಿನಗಳ ಹಿಂದೆ ಯಾರೋ ಕಿಡಿಗೇಡಿಗಳು ರಾತ್ರಿ ಹೊತ್ತು ಹೋರಿ ಕರುವೊಂದನ್ನು ಸುಬ್ರಹ್ಮಣ್ಯ –ಜಾಲ್ಸೂರು ಸಂಪರ್ಕ ರಸ್ತೆಯ ಮಲೆಯಾಳ ಬಳಿ ತಂದು ಬಿಟ್ಟು ಹೋಗಿದ್ದರು. ಅಂದಿನಿಂದ ಸ್ಥಳಿಯವಾಗಿ ಕರುವುದು ತಿರುಗಾಡಿಕೊಂಡಿತ್ತು. ಬುಧವಾರ ಕಾಲಿಗೆ ಏಟು ಮಾಡಿಕೊಂಡ ಸ್ಥಿತಿಯಲ್ಲಿ ಕರು ರಸ್ತೆ ಬದಿ ಇರುವುದನ್ನು ಗಮನಿಸಿದ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ಅವರ ಗಮನಕ್ಕೆ ತಂದಿದ್ದರು.
ಕರುವಿಗೆ ಮಠದ ಗೋಶಾಲೆಯಲ್ಲಿ ಆಶ್ರಯ ಒದಗಿಸುವ ಕುರಿತು ಅವರಿಂದ ಭರವಸೆ ವ್ಯಕ್ತಗೊಂಡಿತ್ತು. ಜತೆಗೆ ಮಠದಿಂದ ವಾಹನವನ್ನು ಸಿಬಂದಿಗಳನ್ನು ಮಕ್ಕಳ ಜತೆ ಕಳಿಸಿಕೊಟ್ಟು ವ್ಯವಸ್ಥೆ ಕಲ್ಪಿಸಿದ್ದರು. ಅದರಂತೆ ಸಿಬಂದಿಗಳ ನೆರವಿನಿಂದ ವಿದ್ಯಾರ್ಥಿಗಳು ಕರುವನ್ನು ಹಿಡಿದು ತಂದು ಮಠಕ್ಕೆ ಒಪ್ಪಿಸಿದ್ದು ಮಠದಲ್ಲಿ ಕರುವಿಗೆ ಚಿಕಿತ್ಸೆ ನೀಡಿ ಆಶ್ರಯ ನೀಡಲಾಗಿದೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…