(ಕಡತ ಚಿತ್ರ )
ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ 86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…