ರಾಜ್ಯ

ಸುಬ್ರಹ್ಮಣ್ಯ – ಸಕಲೇಶಪುರ ರೈಲು ಮಾರ್ಗದಲ್ಲಿ ಆತಂಕ ಹಳಿಗೆ ಉರುಳಲು ಸಿದ್ದವಾಗಿದೆ ಬಂಡೆ !

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ  ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ   ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.

Advertisement
Advertisement

ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ  86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.

ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

5 minutes ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

1 day ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

1 day ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago