(ಕಡತ ಚಿತ್ರ )
ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ 86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…