(ಕಡತ ಚಿತ್ರ )
ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ 86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…