(ಕಡತ ಚಿತ್ರ )
ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ 86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…