(ಕಡತ ಚಿತ್ರ )
ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ 86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…