(ಕಡತ ಚಿತ್ರ )
ನೆಟ್ಟಣ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಸುಬ್ರಹ್ಮಣ್ಯದಿಂದ ಸಕಲೇಶಪುರ ನಡುವಿನ ರೈಲು ಹಳಿಯಲ್ಲಿ ಮಣಿಬಂಡ ಎಂಬಲ್ಲಿ ಬಂಡೆಯೊಂದು ರೈಲು ಹಳಿ ಮೇಲೆ ಉರುಳಿ ಬೀಳಲು ಸಿದ್ದವಾಗಿದೆ. ಬಂಡೆ ತೆರವು ಕಾಮಗಾರಿಯನ್ನು ಶನಿವಾರ ನಡೆಸಲು ರೈಲ್ವೆ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಶನಿವಾರ ಬಂಡೆ ಸ್ಪೋಟಿಸುವ ಕಾಮಗಾರಿ ವೇಳೆ ಮತ್ತಷ್ಟು ಭೂಕುಸಿತ ಆದಲ್ಲಿ ಈ ಮಾರ್ಗದಲ್ಲಿ ಶನಿವಾರ ಹಗಲು ಅಥವಾ ರಾತ್ರಿ ಅವಧಿ ರೈಲು ಓಡಾಟಗಳಲ್ಲಿ ವ್ಯತ್ಯಯಗಳು ಉಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ರಸ್ತೆ ಮತ್ತು ಸಿರಿಬಾಗಿಲು ನಡುವಿನ 86 ನೇ ಕಿ.ಮೀ ನಲ್ಲಿ ಹಳಿಯ ಮೇಲೆ ಕಳೆದ ಮಳೆಗಾಲ ಆಗಸ್ಟ್ ನಲ್ಲಿ ಭಾರಿ ಭೂಕುಸಿತ ಸಂಭವಿಸಿತ್ತು. ಹಲವು ಕಡೆ ಭೂಕುಸಿತ ಸಂಭವಿಸಿ ಅನಾಹುತ ಸೃಷ್ಟಿಸಿತ್ತು. ಅಂದು ಭೂಕುಸಿತಗೊಂಡ ಸ್ಥಳದಲ್ಲಿ ಈ ಅಪಾಯಕಾರಿ ಬಂಡೆ ಇದೆ. ಈ ಸ್ಥಳದಲ್ಲಿ ಇನ್ನಷ್ಟು ಭೂಕುಸಿತ ನಡೆಯುವ ಸಾಧ್ಯ ತೆಗಳು ಕಂಡುಬಂದಿವೆ. ಶುಕ್ರವಾರ ರಾತ್ರಿ ರೈಲು ಓಡಾಟ ನಡೆಸಿದ ಬಳಿಕವಷ್ಟೆ ಬಂಡೆ ತೆರವು ಕಾಮಗಾರಿ ಕುರಿತು ರೈಲ್ವೆ ಅಧಿಕಾರಿಗಳು ನಿರ್ಧಾರಿಸಲಿದ್ದಾರೆ.
ದಕ್ಷಿಣ ಪಶ್ಚಿಮ ರೈಲ್ವೆ ವಿಭಾಗದ ತಾಂತ್ರಿಕ ಅಧಿಕಾರಿಗಳು ಈ ಭಾಗದಲ್ಲಿ ಮೊಕ್ಕಂ ಹೂಡಿ ಪರಿಶೀಲನೆ ನಡೆಸುತಿದ್ದಾರೆ.ಅತೀವ ಮಳೆ ಇರುವ ಕಾರಣ ಈ ಮಾರ್ಗದಲ್ಲಿ ರೈಲು ಯಾನದ ಕುರಿತು ತೀವ್ರ ನಿಗಾವಹಿಸಲಾಗಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…