ಸುಬ್ರಹ್ಮಣ್ಯ : ಸರ್ಪಸಂಸ್ಕಾರ ವಿವಾದ ಬಗೆಹರಿಸಲು ಪೇಜಾವರ ಶ್ರೀ ಆಗಮನ

June 7, 2019
5:50 PM

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಸ್ವಾಮಿ ಮಠದ ನಡುವೆ ಕಳೆದ ಕೆಲವು ಸಮಯಗಳಿಂದ ನಡೆಯುತ್ತಿದ್ದ ಸರ್ಪಸಂಸ್ಕಾರ ಸೇವೆಯ ಬಗೆಗಿನ ವಿವಾದವನ್ನು  ಬಗೆಹರಿಸಲು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಪಾದಂಗಳವರಿಗೆ ದೇವಸ್ಥಾನದ ಗೋಪುರದಿಂದ ದೇವಸ್ಥಾನದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು. ಬಳಿಕ ಶ್ರೀಗಳು ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು.ಈ ಸಂದರ್ಭ ವಿಶ್ವ ಹಿಂದೂ ಪರಿಷದ್ ಮುಖಂಡ ಎಂ.ಬಿ.ಪುರಾಣಿಕ್ , ಬಜರಂಗದಳ ಮುಖಂಡರಾದ ಶರಣ್ ಪಂಪ್ ವೆಲ್,  ಹಿಂದೂ ಮುಖಂಡರುಗಳಾದ ಜಗದೀಶ ಶೇಣವ, ಪ್ರಮುಖರಾದ ಹರಿಕೃಷ್ಣ ಪುನರೂರು ಮೊದಲಾದವರು ಇದ್ದರು.

ಇದೀಗ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಜೊತೆ ಮಾತನಾಡಿದ ಬಳಿಕ ಪೇಜಾವರ ಶ್ರೀಗಳು ಭಕ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, ವಿವಾದ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!
March 10, 2025
8:07 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ
March 10, 2025
8:00 AM
by: ದಿವ್ಯ ಮಹೇಶ್
ಲೋಕ ಅದಾಲತ್‌ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥ
March 10, 2025
7:41 AM
by: The Rural Mirror ಸುದ್ದಿಜಾಲ
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 6 ಹುಲಿ ಮರಿಗಳ ಜನನ | ಶೀಘ್ರದಲ್ಲೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ
March 10, 2025
7:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror