Advertisement
ಕಲೆ-ಸಂಸ್ಕೃತಿ

ಸುಬ್ರಹ್ಮಣ್ಯ: ಸುನಾದ ಸಂಗೀತೋತ್ಸವ -2019

Share

ಸುಬ್ರಹ್ಮಣ್ಯ: ಸುನಾದ ಸಂಗೀತ ಕಲಾ ಶಾಲೆ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ನಡೆಸಲ್ಪಡುವ “ಸುನಾದ ಸಂಗೀತೋತ್ಸವ -2019” ಶ್ರೀ ವನದುರ್ಗ ದೇವಿ ಸಭಾಭವನದಲ್ಲಿ ಡಿ.15 ರಂದು ನಡೆಯಿತು. ಸುನಾದದ ಮುಖ್ಯಸ್ಥರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ದೀಪ ಬೆಳಗುವುದರ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಶಿಸ್ತು, ಗುರುಭಕ್ತಿ, ಶ್ರದ್ಧೆ, ಸತತ ಅಭ್ಯಾಸವಿದ್ದರೆ ಮಾತ್ರ ಶಾಸ್ತ್ರೀಯ ಸಂಗೀತದಲ್ಲಿ ಯಶಸ್ಸು. ಭಗವಂತನ ನಾಮಸ್ಮರಣೆಯ ಮೂಲಕ ಭವ ಸಾಗರವನ್ನು ದಾಟುವುದೇ ಸಂಗೀತದ ಉದ್ದೇಶ. ಮೊಬೈಲ್, ಇಂಟರ್ನೆಟ್ ಯುಗದಲ್ಲಿ ನಮ್ಮ ಸಂಸ್ಕೃತಿಗೆ ಧಕ್ಕೆಯಾಗದಂತೆ ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸಬೇಕೆಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಪೋಷಕರಾದ ಶ್ರೀ ಸೋಮಶೇಖರ್, ರೇಖರಾಣಿ, ಸವಿತಾ, ಲತಾ ಸರ್ವೇಶ್ವರ, ಸುಭಾಶಿಣಿ ಶಿವರಾಂ, ಪ್ರತಿಭಾ ಉದಯ ಕುಮಾರ್, ಸಂಧ್ಯಾ ಶ್ರೀನಿವಾಸ್, ಗಂಗಾದೇವಿ, ಅಮೃತವರ್ಷಿಣಿ, ನೀಲಪ್ಪ ಗೌಡ ಉಪಸ್ಥಿತರಿದ್ದರು.

ತದನಂತರ ಸುಬ್ರಮಣ್ಯ ಶಾಖೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು. ಇವರಿಗೆ ವಯಲಿನ್ ನಲ್ಲಿ ಧನಶ್ರೀ ಶಬರಾಯ, ಧನ್ಯಶ್ರೀ, ಶ್ರೀರಾಮ ಕಾಂಚನ, ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಸುಳ್ಯ, ಅರವಿಂದ, ಶ್ರೀರಾಮ, ಮೋರ್ಸಿಂಗ್ ನಲ್ಲಿ ಭರತ್ ಕುಮಾರ್ ಇವರು ಸಾಥ್ ನೀಡಿದರು. ಶ್ರೀಮತಿ ರೇಖರಾಣಿ, ಸವಿತಾ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಪ್ರಧಾನ ಕಾರ್ಯಕ್ರಮವಾಗಿ ಡಾ. ಅಕ್ಷಯ ನಾರಾಯಣ ಕಾಂಚನ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ ನಲ್ಲಿ ವಿದ್ವಾನ್ ಬಿ ರಘುರಾಮ್ ಬೆಂಗಳೂರು, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಹಾಗೂ ಮೋರ್ಸಿಂಗ್ ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಇವರು ಸಾಥ್ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

10 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

10 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

10 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

10 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago