Advertisement
ಕಲೆ-ಸಂಸ್ಕೃತಿ

ಸುಬ್ರಹ್ಮಣ್ಯ: ಸುನಾದ ಸಂಗೀತೋತ್ಸವ -2019

Share

ಸುಬ್ರಹ್ಮಣ್ಯ: ಸುನಾದ ಸಂಗೀತ ಕಲಾ ಶಾಲೆ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ನಡೆಸಲ್ಪಡುವ “ಸುನಾದ ಸಂಗೀತೋತ್ಸವ -2019” ಶ್ರೀ ವನದುರ್ಗ ದೇವಿ ಸಭಾಭವನದಲ್ಲಿ ಡಿ.15 ರಂದು ನಡೆಯಿತು. ಸುನಾದದ ಮುಖ್ಯಸ್ಥರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ದೀಪ ಬೆಳಗುವುದರ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಶಿಸ್ತು, ಗುರುಭಕ್ತಿ, ಶ್ರದ್ಧೆ, ಸತತ ಅಭ್ಯಾಸವಿದ್ದರೆ ಮಾತ್ರ ಶಾಸ್ತ್ರೀಯ ಸಂಗೀತದಲ್ಲಿ ಯಶಸ್ಸು. ಭಗವಂತನ ನಾಮಸ್ಮರಣೆಯ ಮೂಲಕ ಭವ ಸಾಗರವನ್ನು ದಾಟುವುದೇ ಸಂಗೀತದ ಉದ್ದೇಶ. ಮೊಬೈಲ್, ಇಂಟರ್ನೆಟ್ ಯುಗದಲ್ಲಿ ನಮ್ಮ ಸಂಸ್ಕೃತಿಗೆ ಧಕ್ಕೆಯಾಗದಂತೆ ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸಬೇಕೆಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಪೋಷಕರಾದ ಶ್ರೀ ಸೋಮಶೇಖರ್, ರೇಖರಾಣಿ, ಸವಿತಾ, ಲತಾ ಸರ್ವೇಶ್ವರ, ಸುಭಾಶಿಣಿ ಶಿವರಾಂ, ಪ್ರತಿಭಾ ಉದಯ ಕುಮಾರ್, ಸಂಧ್ಯಾ ಶ್ರೀನಿವಾಸ್, ಗಂಗಾದೇವಿ, ಅಮೃತವರ್ಷಿಣಿ, ನೀಲಪ್ಪ ಗೌಡ ಉಪಸ್ಥಿತರಿದ್ದರು.

ತದನಂತರ ಸುಬ್ರಮಣ್ಯ ಶಾಖೆಯ ವಿದ್ಯಾರ್ಥಿಗಳಿಂದ ಕರ್ನಾಟಕ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು. ಇವರಿಗೆ ವಯಲಿನ್ ನಲ್ಲಿ ಧನಶ್ರೀ ಶಬರಾಯ, ಧನ್ಯಶ್ರೀ, ಶ್ರೀರಾಮ ಕಾಂಚನ, ಮೃದಂಗದಲ್ಲಿ ವಿದ್ವಾನ್ ಶ್ಯಾಮ ಭಟ್ ಸುಳ್ಯ, ಅರವಿಂದ, ಶ್ರೀರಾಮ, ಮೋರ್ಸಿಂಗ್ ನಲ್ಲಿ ಭರತ್ ಕುಮಾರ್ ಇವರು ಸಾಥ್ ನೀಡಿದರು. ಶ್ರೀಮತಿ ರೇಖರಾಣಿ, ಸವಿತಾ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ಪ್ರಧಾನ ಕಾರ್ಯಕ್ರಮವಾಗಿ ಡಾ. ಅಕ್ಷಯ ನಾರಾಯಣ ಕಾಂಚನ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಇವರಿಗೆ ವಯಲಿನ್ ನಲ್ಲಿ ವಿದ್ವಾನ್ ಬಿ ರಘುರಾಮ್ ಬೆಂಗಳೂರು, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಹಾಗೂ ಮೋರ್ಸಿಂಗ್ ನಲ್ಲಿ ವಿದ್ವಾನ್ ವಿ ಎಸ್ ರಮೇಶ್ ಮೈಸೂರು ಇವರು ಸಾಥ್ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

2 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

2 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago