ಸುಬ್ರಹ್ಮಣ್ಯ: ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ ಎಂಬ ಘೋಷವಾಕ್ಯದಡಿಯಲ್ಲಿ, ಒಮಾನಾ ಸುಬ್ರಹ್ಮಣ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಜ.17ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಭೆ ಸೇರಿ ಪಥಸಂಚಲನ ನಡೆಸಿ, ನಿಧಾನವಾಗಿ ಚಲಿಸಿ ಕುಟುಂಬ ನಿಮ್ಮ ಬರುವಿಕೆಗೆ ಕಾಯುತ್ತಿರುತ್ತದೆ, ಹೆಲ್ಮೆಟ್ ಧರಿಸಿ, ಸಿಟಿಬೆಲ್ಟ್ ಧರಿಸಿ, ರಸ್ತೆ ಸುರಕ್ಷತೆ ಎಂಬುದು ಅತೀ ಚಿಕ್ಕ ವಿಷಯ ನಿರ್ಲಕ್ಷ ಮಾಡಿದರೆ ದುಬಾರಿ ಆಗುತ್ತದೆ, ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿ ಎಂಬುದಾಗಿ ಸಾರ್ವಜನಿಕರಲ್ಲಿ ಅರಿವುಮೂಡಿಸುವ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಒಮಾನಾ, ಎ. ಎಸ್. ಐ ಕರುಣಾಕರ , ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ ಏನ್. ಎಸ್, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕಿ ಸ್ಮಿತಾ, ಶಿಕ್ಷಕ ಗುರುರಾಜ್, ಹಾಗು ಪೊಲೀಸ್ ಸಿಬಂದಿಗಳು, ಹೋಮ್ ಗಾರ್ಡ್ ಸಿಬಂದಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…