ಸುಬ್ರಹ್ಮಣ್ಯ: ಸುರಕ್ಷತೆಯ ಪ್ರಯಾಣ ನಮ್ಮೆಲ್ಲರ ಆದ್ಯತೆಯಾಗಿರಲಿ ಎಂಬ ಘೋಷವಾಕ್ಯದಡಿಯಲ್ಲಿ, ಒಮಾನಾ ಸುಬ್ರಹ್ಮಣ್ಯ ಠಾಣಾಧಿಕಾರಿ ನೇತೃತ್ವದಲ್ಲಿ ಸಂಚಾರ ನಿಯಂತ್ರಣ ಮತ್ತು ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆಯಿತು.
ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು ಹಾಗು ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಜ.17ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಸಭೆ ಸೇರಿ ಪಥಸಂಚಲನ ನಡೆಸಿ, ನಿಧಾನವಾಗಿ ಚಲಿಸಿ ಕುಟುಂಬ ನಿಮ್ಮ ಬರುವಿಕೆಗೆ ಕಾಯುತ್ತಿರುತ್ತದೆ, ಹೆಲ್ಮೆಟ್ ಧರಿಸಿ, ಸಿಟಿಬೆಲ್ಟ್ ಧರಿಸಿ, ರಸ್ತೆ ಸುರಕ್ಷತೆ ಎಂಬುದು ಅತೀ ಚಿಕ್ಕ ವಿಷಯ ನಿರ್ಲಕ್ಷ ಮಾಡಿದರೆ ದುಬಾರಿ ಆಗುತ್ತದೆ, ರಸ್ತೆ ನಿಯಮ ಪಾಲಿಸಿ ಜೀವ ಉಳಿಸಿ ಎಂಬುದಾಗಿ ಸಾರ್ವಜನಿಕರಲ್ಲಿ ಅರಿವುಮೂಡಿಸುವ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಠಾಣಾಧಿಕಾರಿ ಒಮಾನಾ, ಎ. ಎಸ್. ಐ ಕರುಣಾಕರ , ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ ಏನ್. ಎಸ್, ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಶಿಕ್ಷಕಿ ಸ್ಮಿತಾ, ಶಿಕ್ಷಕ ಗುರುರಾಜ್, ಹಾಗು ಪೊಲೀಸ್ ಸಿಬಂದಿಗಳು, ಹೋಮ್ ಗಾರ್ಡ್ ಸಿಬಂದಿಗಳು ಹಾಗು ವಿದ್ಯಾರ್ಥಿಗಳು ಪಾಲ್ಗೊಂಡರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…