ಸುಳ್ಯ: ಹಿರಿಯ ಸಾಹಿತಿ ಸುಬ್ರಾಯ ಚೊಕ್ಕಾಡಿಯವರ ಕವನ ಸಂಕಲನ ಕಲ್ಲುಮಂಟಪ ಸೋಮವಾರ ಬಿಡುಗಡೆಯಾಯಿತು. ಸುಬ್ರಾಯ ಚೊಕ್ಕಾಡಿ ಅವರ 80 ನೇ ಹುಟ್ಟುಹಬ್ಬದ ಸಂದರ್ಭ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಕವನಸಂಕಲನ ಬಿಡುಗಡೆ ಮಾಡಲಾಯಿತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಫ್ರೆಂಡ್ಸ್ ಕ್ಲಬ್ ಪೈಲಾರು ಇವರ ಜಂಟಿ ಸಹಯೋಗದಲ್ಲಿ ಸುಬ್ರಾಯ ಚೊಕ್ಕಾಡಿಯವರ ಬದುಕು-ಬರಹಗಳ ಬಗ್ಗೆ ಅವಲೋಕನ ಎಂಬ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಆಯೋಜಿಸಲಾಗಿತ್ತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕವನ ಸಂಕಲನ ಕಲ್ಲು ಮಂಟಪ ವನ್ನು ಹಿರಿಯ ಸಾಹಿತಿ, ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಬಿಡುಗಡೆ ಮಾಡಿದರು. ಈ ಸಂದರ್ಭ ಯುವ ಬರಹಗಾರ-ಶಿಕ್ಷಕ ಅರವಿಂದ ಚೊಕ್ಕಾಡಿ ಹಾಗೂ ಬೆಳ್ತಂಗಡಿ ತಾಲೂಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಚಂದ್ರಶೇಖರ ಪೇರಾಲು, ದಯಾನಂದ ಆಳ್ವ, ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…